ರಾಜ್ಯದಲ್ಲಿ ಮಳೆಗೆ ಇದೇ ತಿಂಗಳಲ್ಲಿ 13 ಜನ ಸಾವು 

A B Dharwadkar
ರಾಜ್ಯದಲ್ಲಿ ಮಳೆಗೆ ಇದೇ ತಿಂಗಳಲ್ಲಿ 13 ಜನ ಸಾವು 
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಬೆಂಗಳೂರು : ರಾಜ್ಯಾದ್ಯಂತ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಈ ತಿಂಗಳ ಆರಂಭದಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯಿಂದ 13 ಜನ ಮೃತಪಟ್ಟಿದ್ದಾರೆ.

ಭಾರೀ ಮಳೆಯಿಂದ ಜಾನುವಾರುಗಳು ಮತ್ತು ಆಸ್ತಿಗಳಿಗೆ ದೊಡ್ಡ ಪ್ರಮಾಣದ ಹಾನಿ ಸಂಭವಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಜಿಲ್ಲಾಧಿಕಾರಿಗಳಿಗೆ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸೂಚಿಸಿದ್ದಾರೆ.

ಅಕ್ಟೋಬರ 1 ರಿಂದ ಮಳೆಯಿಂದಾಗಿ ಕರ್ನಾಟಕದಲ್ಲಿ 28 ಜಾನುವಾರುಗಳು ಸಾವನ್ನಪ್ಪಿವೆ, 3,309 ಮನೆಗಳಿಗೆ ಹಾನಿಯಾಗಿದೆ, ಸುಮಾರು 6,279 ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ. ಅಕ್ಟೋಬರ‌ನಲ್ಲಿ ಸಂಭವಿಸಿದ ಮಳೆ ಹಾನಿಗೆ ಪರಿಹಾರವನ್ನು ತಕ್ಷಣವೇ ಜಂಟಿ ಸಮೀಕ್ಷೆ ನಡೆಸಿ ಈ ತಿಂಗಳೊಳಗೆ ವಿತರಿಸಬೇಕು ಎಂದು ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅ. 15ರವರೆಗೆ ಭಾರೀ ಮಳೆಯಾಗಲಿದೆ. ಇಂದು ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.