ಡಿ.22 ರಿಂದ 30 ರವರೆಗೆ ಬೆಳಗಾವಿಯಲ್ಲಿ ಬೃಹತ್ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ; ನಾಳೆ ಮುಖ್ಯಮಂತ್ರಿಗಳಿಂದ ಉದ್ಘಾಟನೆ

A B Dharwadkar
ಡಿ.22 ರಿಂದ 30 ರವರೆಗೆ ಬೆಳಗಾವಿಯಲ್ಲಿ ಬೃಹತ್ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ; ನಾಳೆ ಮುಖ್ಯಮಂತ್ರಿಗಳಿಂದ ಉದ್ಘಾಟನೆ
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಬೆಳಗಾವಿ, ಡಿ.21: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಬೆಳಗಾವಿ ರವರ ಸಹಯೋಗದೊಂದಿಗೆ ಬೆಳಗಾವಿಯಲ್ಲಿ ಅಧಿವೇಶನದ ನಿಮಿತ್ತವಾಗಿ 22 ರಿಂದ 30 ರವರೆಗೆ ಬೆಳಗಾವಿಯ ಸರ್ದಾರ ಹೈಸ್ಕೂಲ್ ಮೈದಾನದಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಆಯೋಜಿಸಲಾಗಿದೆ.

ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಹಾಗೂ ಆರಂಭಿಕ ಗ್ರಾಮೀಣ ಉದ್ಯಮ ಯೋಜನೆಯಡಿ ಸಮುದಾಯ ಉದ್ಯಮ ನಿಧಿ ವಿತರಣೆ ಸಮಾರಂಭವನ್ನು ದಿ. 22 ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವ ಡಾ. ಸಿ.ಎನ್. ಅಶ್ವಥ ನಾರಾಯಣ ಉಪಸ್ಥಿತರಿರುತ್ತಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಅತ್ಯುತ್ತಮ ಗುಣಮಟ್ಟದ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವನ್ನು ಈ ಮೇಳದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಸಮಾರಂಭದಲ್ಲಿ ಆರಂಭಿಕ ಗ್ರಾಮೀಣ ಉದ್ಯಮ ಯೋಜನೆಯಡಿ ಕೊಪ್ಪಳ ಹಾಗೂ ಟಿ.ನರಸೀಪುರ ತಾಲ್ಲೂಕುಗಳ ಸ್ವ-ಸಹಾಯ ಗುಂಪುಗಳಿಗೆ ಸಮುದಾಯ ಉದ್ಯಮ ನಿಧಿಯನ್ನು ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಸಚಿವರಾದ ಗೋವಿಂದ ಎಂ, ಕಾರಜೋಳ, ಶ್ರೀಮತಿ ಶಶಿಕಲಾ ಅ. ಜೊಲ್ಲೆ ಆಗಮಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅನಿಲ ಎಸ್. ಬೆನಕೆ ವಹಿಸಲಿದ್ದಾರೆ ಎಂದು ಎಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಭಿಯಾನ ನಿರ್ದೇಶಕ ಡಾ. ರಾಗಪಿಯಾ.ಆರ್ ತಿಳಿಸಿದ್ದಾರೆ.

150 ಮಳಿಗೆ ಸ್ಥಾಪನೆ; ಪ್ರವೇಶ ಉಚಿತ:

ಈ ಮೇಳದಲ್ಲಿ 150 ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ದಿನಾಂಕಃ22.12.2022 ರಿಂದ ದಿನಾಂಕ: 30.12.2022ರವರೆಗೆ ಉಚಿತ ಪ್ರವೇಶವಿದ್ದು, ಬೆಳಿಗ್ಗೆ 10.30 ಯಿಂದ ರಾತ್ರಿ 9.30ರವರೆಗೆ ಪ್ರದರ್ಶನ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಡಾ. ರಾಗಪಿಯಾ ಆರ್ ತಿಳಿಸಿದ್ದಾರೆ.

ಮಳಿಗೆಯಲ್ಲಿ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳಾದ ಈ ಮೇಳದಲ್ಲಿ ಕರಕುಶಲ ವಸ್ತುಗಳಾದ ಚನ್ನಪಟ್ಟಣದ ಮರದ ಗೊಂಬೆಗಳು, ಕೊಪ್ಪಳದ ಕಿನ್ನಾಳ ಆಟದ ಸಾಮಾನುಗಳು, ಮೊಳಕಾಲ್ಮೂರು ಸೀರೆಗಳು, ಇಳಕಲ್ ಸೀರೆಗಳು, ರೇಷ್ಮೆ ಸೀರೆಗಳು, ಮಸಾಲಾ ಉತ್ಪನ್ನಗಳು, ಸಿರಿ ಧಾನ್ಯ ಉತ್ಪನ್ನಗಳು, ಮೌಲ್ಯವರ್ಧಿತ ಕರಾವಳಿ ಉತ್ಪನ್ನಗಳು, ವಿವಿಧ ಬಗೆಯ ಉಪ್ಪಿನಕಾಯಿ, ಖಾದಿ ಉತ್ಪನ್ನಗಳು, ಬಾಳೆ ನಾರಿನಿಂದ ಉತ್ಪಾದಿಸಿದ ಉತ್ಪನ್ನಗಳು, ಗೃಹಾಲಂಕಾರಿಕ ವಸ್ತುಗಳು, ಪಾರಂಪರಿಕ ವಸ್ತುಗಳು, ಗೃಹೋಪಯೋಗಿ ವಸ್ತುಗಳು, ಆಹಾರ ಉತ್ಪನ್ನಗಳು ಮುಂತಾದವುಗಳು ಸಾರ್ವಜನಿಕರಿಗೆ ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗಲಿದೆ.

ಈ ಮೇಳದ ಮೈದಾನದಲ್ಲಿ ಮಕ್ಕಳಿಗೆ ಆಟಿಕೆ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಉತ್ತರ ಕರ್ನಾಟಕ ಸೇರಿದಂತೆ ಹೆಸರುವಾಸಿ ಆಹಾರಗಳ 10 ಮಳಿಗೆಗಳು ಸ್ಥಾಪಿಸಲಾಗಿದೆ. ಪ್ರಮುಖವಾಗಿ, ಆಹಾರ ಮಳಿಗೆಗಳಲ್ಲಿ ಉತ್ತರ ಕರ್ನಾಟಕದ ಚುರುಮರಿ ಮಂಡಕ್ಕಿ, ಜೋಳದ ಖಡಕ ರೊಟ್ಟಿ ಸೇರಿದಂತೆ ಹೋಳಿಗೆ, ನೀರ ದೋಸೆ ಮುಂತಾದ ಖಾದ್ಯಗಳು ದೊರೆಯಲಿವೆ.

25 ರಂದು ಅರ್ಜುನ ಜನ್ಯ-ಶಮಿತಾ ಮಲ್ನಾಡ ಸಂಗೀತ ಸಂಜೆ:

ಖ್ಯಾತ ಸಂಗೀತ ನಿರ್ದೇಶಕ ಅರ್ಜುನ ಜನ್ಯ, ಗಾಯಕಿಯರಾದ ಡಾ.ಶಮಿತಾ ಮಲ್ನಾಡ ಹಾಗೂ ತಂಡದವರಿಂದ ದಿನಾಂಕಃ25.12.2022 ರಂದು ಸಂಜೆ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸಲಾಗಿರುತ್ತದೆ ಹಾಗೂ ಪ್ರತೀ ದಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸ್ಥಳೀಯ ಕಲಾವಿದರಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಈ ಒಂದು ಮೇಳದಲ್ಲಿ ಪ್ರಮುಖವಾಗಿ ನಗರ ಹಾಗೂ ಗ್ರಾಮೀಣ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳು ಮಾರಾಟ ಮಾಡುತ್ತಿರುವುದರಿಂದ ಹೆಚ್ಚು ಹೆಚ್ಚು ಸಾರ್ವಜನಿಕರು ಈ ಮೇಳದ ಸದುಪಯೋಗವನ್ನು ಪಡೆದುಕೊಂಡು ಸ್ವ-ಸಹಾಯ ಗುಂಪಿನ ಮಹಿಳೆಯರ ಆರ್ಥಿಕ ಸಬಲತೆಗೆ ಕೈಜೋಡಿಸಬೇಕೆಂದು ಕೋರಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.