ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಗೋ ಮೂತ್ರದಿಂದ ಟ್ಯಾಂಕ್ ಸ್ವಚ್ಛಗೊಳಿಸಿದ ಸವರ್ಣೀಯರು

A B Dharwadkar
ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಗೋ ಮೂತ್ರದಿಂದ ಟ್ಯಾಂಕ್ ಸ್ವಚ್ಛಗೊಳಿಸಿದ ಸವರ್ಣೀಯರು
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಚಾಮರಾಜನಗರ : ದಲಿತ ಮಹಿಳೆ ಟ್ಯಾಂಕ್ ನಿಂದ ನೀರು ಕುಡಿದರೆಂಬ ಕಾರಣಕ್ಕೆ ಟ್ಯಾಂಕ್ ಅನ್ನು ಖಾಲಿ ಮಾಡಿಸಿ ಸ್ವಚ್ಛಗೊಳಿಸಿರುವ ಘಟನೆ ಚಾಮರಾಜನಗರ ತಾಲೂಕಿನ‌ ಹೆಗ್ಗೋಠಾರ ಗ್ರಾಮದಲ್ಲಿ ನಡೆದಿದೆ.

ದಲಿತ ಯುವಕನ ಮದುವೆ ಸಮಾರಂಭದಲ್ಲಿ ಭಾಗಿಯಾಗಲು ವಧುವಿನ ಕಡೆಯಿಂದ ಎಚ್‌.ಡಿ.ಕೋಟೆ ತಾಲ್ಲೂಕಿನ ಸರಗೂರಿನಿಂದ ಮಹಿಳೆಯು ಬಂದಿದ್ದರು.

ಈ ವೇಳೆ ಮಧ್ಯಾಹ್ನದ ಊಟ ಮುಗಿಸಿ ಬಸ್‌ಗೆ ಹೋಗುವ ಸಂದರ್ಭದಲ್ಲಿ ಆ ಮಹಿಳೆ ಗ್ರಾಮದ ಸವರ್ಣೀಯರ ಬೀದಿಯಲ್ಲಿನ ತೊಂಬೆಯ ನಲ್ಲಿಯಲ್ಲಿ ನೀರು ಕುಡಿದಿದ್ದಾರೆ. ಅದೇ ಬೀದಿಯವರು ಇದನ್ನು ನೋಡಿದ್ದಾರೆ.

ಆ ಮಹಿಳೆ ದಲಿತ ಸಮುದಾಯದವಳು ಎಂದು ಗೊತ್ತಾಗುತ್ತಿದ್ದಂತೆ ನೀರನ್ನು ಖಾಲಿ ಮಾಡಿಸಿ ಗೋ ಮೂತ್ರದಿಂದ ತೊಳೆದಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ.

ಈ ಸುದ್ದಿ ಹರಡುತ್ತಿದ್ದಂತೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸಮಾಜ ಕಲ್ಯಾಣ ಇಲಾಖೆಗೆ ಆದೇಶಿಸಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.