ವಸತಿ ಶಾಲಾ ಮಕ್ಕಳನ್ನು ಸಾಲಾಗಿ ನಿಲ್ಲಿಸಿ ಬೆಲ್ಟ, ದೊಣ್ಣೆಯಿಂದ ಥಳಿಸಿದ ರಾಕ್ಷಸ

A B Dharwadkar
ವಸತಿ ಶಾಲಾ ಮಕ್ಕಳನ್ನು ಸಾಲಾಗಿ ನಿಲ್ಲಿಸಿ ಬೆಲ್ಟ, ದೊಣ್ಣೆಯಿಂದ ಥಳಿಸಿದ ರಾಕ್ಷಸ
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ತುಮಕೂರು: ವಸತಿ ಶಾಲೆಯೊಂದರ ಮಕ್ಕಳ ಮೇಲೆ ವ್ಯಕ್ತಿಯೋರ್ವ ಮನಬಂದಂತೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ತಾಲೂಕಿನ ಮಲ್ಲಸಂದ್ರದ ವಿಶ್ವಭಾರತಿ ಸರ್ಕಾರಿ ಅನುದಾನಿತ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಕಾರ್ಯದರ್ಶಿ ಎನ್.ಮೂರ್ತಿ ಅವರ ಪುತ್ರ ಭರತ ಈ ಕೃತ್ಯವೆಸಗಿದ್ದು, ಕುಡಿದ ಅಮಲಿನಲ್ಲಿ ವಸತಿ ಶಾಲೆಯ 40 ಮಕ್ಕಳನ್ನು ಸಾಲಾಗಿ ನಿಲ್ಲಿಸಿ ಬೆಲ್ಟ ಹಾಗೂ ದೊಣ್ಣೆಯಿಂದ ಮನಬಂದಂತೆ ಹೊಡೆದಿದ್ದಾನೆ.

ಹಲ್ಲೆ ಘಟನೆಯನ್ನು ಶಾಲಾ ಆಡಳಿತ ಮಂಡಳಿ ಮುಚ್ಚಿಟ್ಟಿತ್ತು. ಘಟನೆ ನಡೆದ ಮೂರು ದಿನಗಳ ಬಳಿಕ ಹಲ್ಲೆಗೊಳಗಾದ ಮಕ್ಕಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗೆ ಧಾವಿಸಿದ್ದಾರೆ. ಈಗ ಆರೋಪಿ ಭರತ ಪರಾರಿಯಾಗಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ಭರತಗಾಗಿ ಹುಡುಕಾಟ ನಡೆಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.