ಕಾಡುಕೋಣ ಇರಿದು ಮಹಿಳೆ ಮೃತ್ಯು

A B Dharwadkar
ಕಾಡುಕೋಣ ಇರಿದು ಮಹಿಳೆ ಮೃತ್ಯು

ಖಾನಾಪುರ, ಎ. 9 : ಕಾಡುಕೋಣ ಇರಿದು ವೃದ್ದೆ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ.

ಖಾನಾಪುರ ತಾಲೂಕಿನ ಅಮಟೆ ಗ್ರಾಮದ ಹೊರವಲಯದ ಬಳಿ ಈ ದುರ್ಘಟನೆ ನಡೆದಿದ್ದು, ಕಾಡುಕೋಣದ ದಾಳಿಯಿಂದ ಸರಸ್ವತಿ ಅರ್ಜುನ ಗಾವಡೆ (80) ಎಂಬವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ.

ಅವರು ಮನೆಯಿಂದ ತಮ್ಮ ಹೊಲದ ಗೋಡಂಬಿ ಬೀಜಗಳನ್ನು ಕೀಳಲು ಹೋದಾಗ ಕಾಡುಕೋಣ ಹಠಾತ್ ದಾಳಿ ನಡೆಸಿ ಅವರ ಹೊಟ್ಟೆಯ ಭಾಗಕ್ಕೆ ತಿವಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.