ಬೆಂಗಳೂರು, ೩೦: ಅಂಬ್ಯುಲೆನ್ಸ ಚಾಲಕರು ಖಾಸಗಿ ಆಸ್ಪತ್ರೆಗಳ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳದೇ ರೋಗಿಗಳನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೂಚನೆ ನೀಡಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡಿದ್ದ 262 ಆಧುನಿಕ ಜೀವರಕ್ಷಕ ಅಂಬ್ಯುಲೆನ್ಸಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಅಂಬ್ಯುಲೆನ್ಸ ಚಾಲಕರು ರೋಗಿಗಳನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು. ಆದರೆ ಕೆಲವರು ಖಾಸಗಿ ಆಸ್ಪತ್ರೆಗಳ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ರೋಗಿಗಳನ್ನು ನೇರವಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ ಎಂದು ಹೇಳಿದರು. ಯಾಕೆ ಸರ್ಕಾರಿ ಆಸ್ಪತ್ರೆಯಲ್ಲಿ ಏನು ಕಡಿಮೆ ಆಗಿದೆ ಎಂದೂ ಅವರು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮಾತನಾಡಿ, ತುರ್ತು ಸಂದರ್ಭದಲ್ಲಿ 108 ಆಂಬ್ಯುಲೆನ್ಸ್ಗಳ ಸೇವೆ ಬಹಳ ಮುಖ್ಯ. ಆದರೆ, ಈ ಸೇವೆಯ ಗುಣಮಟ್ಟದಲ್ಲಿ ಕೆಲವು ಸಮಸ್ಯೆಗಳಿವೆ. ಈ ಸೇವೆಗೆ ಹೊಸ ರೂಪ ಕೊಡಬೇಕಿದೆ’ ಎಂದರು.