ಭದ್ರತಾ ಲೋಪದ ಕಾರಣ ಭಾರತ ಜೋಡೋ ಯಾತ್ರೆ ತಾತ್ಕಾಲಿಕ ಸ್ಥಗಿತ

A B Dharwadkar
ಭದ್ರತಾ ಲೋಪದ ಕಾರಣ ಭಾರತ ಜೋಡೋ ಯಾತ್ರೆ ತಾತ್ಕಾಲಿಕ ಸ್ಥಗಿತ
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಜಮ್ಮು: ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆ ಭದ್ರತಾ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಕೇಂದ್ರಾಡಳಿತ ಸರ್ಕಾರ ಸೂಕ್ತ ಭದ್ರತೆ ನೀಡುವಲ್ಲಿ ವಿಫಲವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಶುಕ್ರವಾರ ಬೆಳಿಗ್ಗೆ ರಾಮ್ಬಾನ್ ಜಿಲ್ಲೆಯ ಕ್ವಾಜಿಗುಂಡ್ನಿಂದ ಭಾರತ್ ಜೋಡೋ ಯಾತ್ರೆ ಪುನರ್ ಆರಂಭವಾಗಿತ್ತು. ಆದರೆ ಭದ್ರತಾ ಲೋಪದಿಂದ ಬನಿಹಾಲ್ ಖಾಜಿಗುಂಡ ಸಮೀಪ ದಿಢೀರ್ ಸ್ಥಗಿತಗೊಂಡಿದೆ. ಕುರಿತು ಎಐಸಿಸಿ ಉಸ್ತುವಾರಿ ರಜನಿ ಪಾಟೀಲ ಅವರು ಟ್ವೀಟ್ ಮಾಡಿ, ಜಮ್ಮು-ಕಾಶ್ಮೀರ ಆಡಳಿತವು ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆಗೆ ಭದ್ರತೆ ಒದಗಿಸಲು ವಿಫಲವಾಗಿದೆ. ಭದ್ರತಾ ಲೋಪಗಳು ಕೇಂದ್ರಾಡಳಿತ ಅಸಮರ್ಥತೆ ಮತ್ತು ತಯಾರಿ ಇಲ್ಲದ ವರ್ತನೆಯನ್ನು ಸೂಚಿಸುತ್ತವೆ ಎಂದು ಆರೋಪಿಸಿದ್ದಾರೆ.

ಖಾಜಿಗುಂಡ್ ತಲುಪಿದ ನಂತರ ರಾಹುಲ್ ಗಾಂಧಿ ಅವರು ಯೋಜನೆಯ ಪ್ರಕಾರ ದಕ್ಷಿಣ ಕಾಶ್ಮೀರದ ವೆಸ್ಸು ಕಡೆಗೆ ನಡೆಯಲು ಪ್ರಾರಂಭಿಸಿದರು. ಆದರೆ ಇದ್ದಕ್ಕಿದ್ದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರಿಂದ ನಿರ್ವಹಿಸಬೇಕಾದ ಹೊರ ಕವಚವು ಕಣ್ಮರೆಯಾಯಿತು ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರು. ರಾಹುಲ್ ಗಾಂಧಿಯವರು ಶುಕ್ರವಾರ 11 ಕಿಲೋ ಮೀಟರ್ ಪಾದಯಾತ್ರೆ ಮಾಡಬೇಕಿತ್ತು. ಆದರೆ ಅವರು ಕೇವಲ 500 ಮೀಟರ್ ನಡೆದ ನಂತರ ಯಾತ್ರೆ ಸ್ಥಗಿತಗೊಳಿಸಲಾಯಿತು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.