ತ್ಯಾಜ್ಯ ನೀರು ನದಿ, ಹಳ್ಳ, ಕೊಳ್ಳಗಳಿಗೆ ಬಿಡುವುದರಿಂದ ಜನ, ಜೀವ ವೈವಿಧ್ಯತೆ ಅಪಾಯದಲ್ಲಿ –ಸುಪ್ರೀಮ ಕೋರ್ಟ

A B Dharwadkar
ತ್ಯಾಜ್ಯ ನೀರು ನದಿ, ಹಳ್ಳ, ಕೊಳ್ಳಗಳಿಗೆ ಬಿಡುವುದರಿಂದ ಜನ, ಜೀವ ವೈವಿಧ್ಯತೆ ಅಪಾಯದಲ್ಲಿ –ಸುಪ್ರೀಮ ಕೋರ್ಟ
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವ ಮೂಲಕ ಕೊಳಚೆ ನೀರಿನ ಸಂಸ್ಕರಣೆಯಲ್ಲಿ ಶೇ 100ರಷ್ಟು ಗುರಿ ಸಾಧಿಸಲು ಇನ್ನಷ್ಟು ಕಾಲಾವಕಾಶ ನೀಡುವಂತೆ ಉತ್ತರಪ್ರದೇಶ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿದ್ದು ಹಳ್ಳಿ, ಪಟ್ಟಣ ಹಾಗೂ ನಗರಗಳಲ್ಲಿ ಉತ್ಪತ್ತಿಯಾಗುತ್ತಿರುವ ಕೊಳಚೆ ನೀರಿನ ಸಂಸ್ಕರಣೆ ಕುರಿತು ಸುಪ್ರೀಮ ಕೋರ್ಟ್ ಗುರುವಾರ ತೀವ್ರ ಕಳವಳ ವ್ಯಕ್ತಪಡಿಸಿದೆ.

ಸಂಸ್ಕರಿಸದೇ ತ್ಯಾಜ್ಯ ನೀರನ್ನು ನದಿ ಹಾಗೂ ಹಳ್ಳ, ಕೊಳ್ಳಗಳಿಗೆ ಹರಿಸಲಾಗುತ್ತಿದೆ. ಮೂಲಕ ಜಲಮೂಲಗಳನ್ನೇ ಕಲುಷಿತಗೊಳಿಸಲಾಗುತ್ತಿದ್ದು, ಇದರ ಮೇಲೆ ಅವಲಂಬಿತವಾಗಿರುವ ನಾಗರಿಕರು ಹಾಗೂ ಜೀವ ವೈವಿಧ್ಯತೆ ಅಪಾಯಕ್ಕೆ ಸಿಲುಕಿದೆ ಎಂದು ನ್ಯಾಯಮೂರ್ತಿ ಪಿ.ಎಸ್‌.ನರಸಿಂಹ ಹಾಗೂ ಜೆ.ಬಿ.ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠ ಆತಂಕ ವ್ಯಕ್ತಪಡಿಸಿದೆ.

ಉತ್ತರಪ್ರದೇಶದಲ್ಲಿ ಎಸ್ಟಿಪಿಗಳನ್ನು ಮೇಲ್ದರ್ಜೆಗೇರಿಸಲು ಹಾಗೂ ಅವುಗಳ ನಿರ್ವಹಣೆಗೆ ಅಗತ್ಯ ಅನುದಾನ ಒದಗಿಸಲಾಗುತ್ತಿದೆಯೇ, ಅವುಗಳ ಕಾರ್ಯಕ್ಷಮತೆ ಹೆಚ್ಚಿಸಲು ಸೂಕ್ತ ಕಾರ್ಯವಿಧಾನವನ್ನು ರೂಪಿಸಲಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಿ ಎಂದು ನ್ಯಾಯಪೀಠವು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಗೆ (ಎನ್ಜಿಟಿ) ಸೂಚಿಸಿದೆರಾಜ್ಯದಲ್ಲಿ ಪ್ರತಿ ದಿನ 5,500 ದಶಲಕ್ಷ ಲೀಟರ್ಕೊಳಚೆ ನೀರು ಉತ್ಪತ್ತಿಯಾಗುತ್ತಿದೆ. ದೇಶದಲ್ಲೇ ಇದು ಅಧಿಕವಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.