ಬಳ್ಳಾರಿ : ಬಿಜೆಪಿ ಮತ್ತು ಆರ್ಎಸ್ಎಸ್ನ ಸಿದ್ಧಾಂತವು ದೇಶವನ್ನು ಒಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
ಬಳ್ಳಾರಿಯಲ್ಲಿ ನಡೆದ ಭಾರತ ಜೋಡೋ ಮೆಗಾ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿ, ಆರ್ಎಸ್ಎಸ್ನ ಸಿದ್ಧಾಂತವು ದೇಶವನ್ನು ಮುರಿಯುತ್ತಿದೆ. ಹಾಗಾಗಿ ನಾವು ಈ ಯಾತ್ರೆಯನ್ನು ಭಾರತ ಜೋಡೋ ಯಾತ್ರೆ ಎಂದು ಹೆಸರಿಸಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದರು.
ಕನ್ಯಾಕುಮಾರಿಯಿಂದ ಸೆಪ್ಟೆಂಬರ 7 ರಂದು ಪ್ರಾರಂಭವಾದ 3,570 ಕಿ.ಮೀ ಭಾರತ ಜೊಡೊ ಯಾತ್ರೆ 38ನೇ ದಿನವನ್ನು ಪ್ರವೇಶಿಸಿದೆ. ಇಂದು ಭಾರತವು 45 ವರ್ಷಗಳಲ್ಲಿ ಅತಿ ಹೆಚ್ಚು ನಿರುದ್ಯೋಗವನ್ನು ಹೊಂದಿದೆ. ಪ್ರತಿವರ್ಷ 2 ಕೋಟಿ ಯುವಕರಿಗೆ ಉದ್ಯೋಗವನ್ನು ಒದಗಿಸುವುದಾಗಿ ಪ್ರಧಾನಿ ಹೇಳಿದ್ದರು. ಆ ಉದ್ಯೋಗಗಳು ಎಲ್ಲಿಗೆ ಹೋದವು. ಬದಲಾಗಿ, ಯುವಕರು ನಿರುದ್ಯೋಗಿಗಳಾಗಿದ್ದಾರೆ ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ ನೀವು ಪೊಲೀಸ್ ಸಬ್-ಇನ್ಸ್ಪೆಕ್ಟರ್ ಆಗಲು ಬಯಸಿದರೆ ನೀವು 80 ಲಕ್ಷ ರೂ. ಕೊಡಬೇಕು. ನಿಮ್ಮ ಜೀವನದುದ್ದಕ್ಕೂ ನೀವು ನಿರುದ್ಯೋಗಿಯಾಗಿ ಉಳಿಯಬಹುದು ಎಂದು ರಾಹುಲ್ ಗಾಂಧಿ ಹೇಳಿದರು.