ಹೈಕಮಾಂಡ್ ಒಪ್ಪಿದರೇ ಶೀಘ್ರದಲ್ಲೇ ಸಂಪುಟ ವಿಸ್ತರಣೆ : ಮುಖ್ಯಮಂತ್ರಿ ಬೊಮ್ಮಾಯಿ

A B Dharwadkar
ಹೈಕಮಾಂಡ್ ಒಪ್ಪಿದರೇ ಶೀಘ್ರದಲ್ಲೇ ಸಂಪುಟ ವಿಸ್ತರಣೆ : ಮುಖ್ಯಮಂತ್ರಿ ಬೊಮ್ಮಾಯಿ
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಚಿತ್ರದುರ್ಗ : ಹೈಕಮಾಂಡ್ ಸಮ್ಮತಿಸಿದರೆ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿದೆ. ಅವರು ಆದಷ್ಟೂ ಬೇಗನೇ ಸಚಿವ ಸಂಪುಟ ವಿಸ್ತರಣೆ ಮಾಡೋಣ ಎಂಬ ಭರವಸೆ ನೀಡಿದ್ದಾರೆ. ವರಿಷ್ಠರು ನನ್ನನ್ನು ಕರೆಸಿ ಮಾತನಾಡಿದರೆ ಆದಷ್ಟು ಬೇಗನೇ ಪ್ರಕ್ರಿಯೆ ಪ್ರಾರಂಭ ಮಾಡಲಾಗುವುದು ಎಂದು ಹೇಳಿದ್ದಾರೆ.

ಸದ್ಯ ಸಂಪುಟದಲ್ಲಿ ಖಾಲಿ ಇರುವ 6 ಸ್ಥಾನಗಳ ಭರ್ತಿ ಮಾಡುವ ಸಾಧ್ಯತೆ ಇದೆ. ಕೆ.ಎಸ್. ಈಶ್ವರಪ್ಪ, ರಮೇಶ ಜಾರಕಿಹೊಳಿ ಸಂಪುಟಕ್ಕೆ ಮರು ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.