1 ವಾರದಿಂದ ರಾಜ್ಯದಲ್ಲಿ ಕೊರೋನಾ ಹೆಚ್ಚಳ; ಸೋಮವಾರ ತಜ್ಞರ ಸಭೆ

A B Dharwadkar
1 ವಾರದಿಂದ ರಾಜ್ಯದಲ್ಲಿ ಕೊರೋನಾ ಹೆಚ್ಚಳ; ಸೋಮವಾರ ತಜ್ಞರ ಸಭೆ
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಬೆಂಗಳೂರು: ಕಳೆದ 1 ವಾರದಿಂದ ಕರ್ನಾಟಕದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿದ್ದು ಆರೋಗ್ಯ ಸಚಿವರು ಸೋಮವಾರ ತುರ್ತು ಸಭೆ ನಡೆಸಲಿದ್ದಾರೆ.

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ರವಿವಾರ ವಿಧಾನಸೌಧ ಆವರಣದಲ್ಲಿ​ ಸೈಕಲ್ ಜಾಥಾಗೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಎಚ್​​3ಎನ್​2 ಬಗ್ಗೆ ನಿಗಾವಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದ್ದು, ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಚರ್ಚಿಸಿ ನಾಳಿನ ಸಭೆಯ ಎಲ್ಲಾ ಮಾಹಿತಿ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಕೊರೋನಾ ಪ್ರಕರಣಗಳಲ್ಲಿ ದಿನದಿಂದ ದಿನ ಏರಿಕೆ ಕಂಡು ಬರುತ್ತಿದೆ. ಮಾರ್ಚ 4 ರಂದು ರಾಜ್ಯದಲ್ಲಿ 95 ಹಾಗೂ ಬೆಂಗಳೂರಿನಲ್ಲಿ 79 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. 100 ದಿನಗಳ ನಂತರ ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಳವಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಈವರೆಗೆ ಒಟ್ಟು 391 ಸಕ್ರಿಯ ಪ್ರಕರಣಗಳು ಇದ್ದು, ವಾರದಲ್ಲಿ ಕೋವಿಡ್ ಖಚಿತ ಪ್ರಕರಣ ಶೇಕಡವಾರು ಪ್ರಮಾಣ 2.44ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಚ್​​3ಎನ್​2 ಬಗ್ಗೆ ನಿಗಾವಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ. ಈ ಸಂಬಂಧ ಮಾ.6 ರಂದು ಅಧಿಕಾರಿಗಳು ಮತ್ತು ತಜ್ಞರ ಜತೆ ಸಭೆ ನಡೆಸಲಾಗುತ್ತದೆ. ರೋಗ ಲಕ್ಷಣದಿಂದಾಗಿ ಕೆಮ್ಮು ಉಂಟಾಗಿರುವ ಮಾಹಿತಿ ಇದೆ. ಸೋಂಕು ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.