ಮಳೆ, ಶೀತಗಾಳಿ: ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.27 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

A B Dharwadkar
ಮಳೆ, ಶೀತಗಾಳಿ: ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.27 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಧಾರವಾಡ, ಜುಲೈ 26: ಧಾರವಾಡ ಜಿಲ್ಲೆಯಾದ್ಯಂತ ಸತತವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಶೀತಗಾಳಿ ಬೀಸುತ್ತಿರುವದರಿಂದ ಈಗಾಗಲೇ ಜುಲೈ 25, 26 ರಂದು ಎರಡು ದಿನ ಧಾರವಾಡ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜು, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಅಂಗನವಾಡಿಗಳಿಗೆ ನೀಡಿದ ರಜೆಯನ್ನು ನಾಳೆ ಜುಲೈ 27, 2024 ರವರೆಗೆ ಮುಂದುವರೆಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಶುಕ್ರವಾರ ಸಂಜೆ ಆದೇಶಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ. ಮತ್ತು ಶೀತಗಾಳಿ ಬಿಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜು, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.