ಅಕ್ಟೋಬರ್‍ 16 ರಂದು ಕೆಪಿಸಿಸಿ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ

A B Dharwadkar
ಅಕ್ಟೋಬರ್‍ 16 ರಂದು ಕೆಪಿಸಿಸಿ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ರಾಯಚೂರು: ಅಕ್ಟೋಬರ 16 ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು.

ಭಾರತ ಜೋಡೋ ಕಾರ್ಯಕ್ರಮದ ಪೂರ್ವಭಾವಿ ಸಭೆಗೆ ನಡೆಸುವುದಕ್ಕೆ ರಾಯಚೂರಿಗೆ ಆಗಮಿಸಿ ಮಾತನಾಡಿದ ಅವರು, ನಾನು ಅಧ್ಯಕ್ಷನಾಗಿ ಎರಡು‌ ವರ್ಷಗಳು ಪೂರ್ಣವಾಗುತ್ತಿವೆ. ಎಐಸಿಸಿ ಈಗಾಗಲೇ ಪ್ರಕಟಿಸಿದಂತೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ ‌ಭವನದಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದರು.

ಇನ್ನು ಕಾಂಗ್ರೆಸ್ ಹಗರಣಗಳನ್ನು ಬಯಲಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಚೆಗೆ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರಿಗೆ ನನ್ನ ಮೇಲೆ ಹಾಗೂ ಸಿದ್ದರಾಮಯ್ಯ ಅವರ ಮೇಲೆ ಪ್ರೀತಿ ಜಾಸ್ತಿ ಅದಕ್ಕೆ ನಮ್ಮ ಬಗ್ಗೆ ಹಗರಣದ ಆರೋಪ ಮಾಡುತ್ತಾರೆ ಎಂದು ಹೇಳಿದರು.

ಬಿಜೆಪಿಯವರ ಬೆದರಿಕೆಗೆ ನಾವು ಹೆದರುವುದಿಲ್ಲ. ದಿಟ್ಟತನದಿಂದ ಉತ್ತರಿಸುತ್ತೇವೆ. ಆದರೆ ಸಾಮಾಜಿಕ ಮಾಧ್ಯಮಗಳ ಬಿಜೆಪಿಯವರಿಗೆ ಪ್ರತಿದಿನ ಒಂದು ಪ್ರಶ್ನೆ ಕೇಳುತ್ತಿದ್ದೇವೆ. ಆದರೆ ಏಕೆ ಉತ್ತರಿಸುತ್ತಿಲ್ಲ ಎಂದರು..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.