ಬೆಂಗಳೂರು : ಬಜರಂಗದಳ, ಪಿಎಫ್ ಐ, ಎಸ್ ಡಿಪಿಐ ಸೇರಿದಂತೆ ಯಾರೇ ಇರಲಿ ಇಂಥ ಎಲ್ಲಾ ಸಂಘಟನೆಗಳನ್ನು ನಿಷೇಧ ಮಾಡಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಜರಂಗದಳ, ಪಿಎಫ್ ಐ, ಎಸ್ ಡಿಪಿಐ ಸಂಘಟನೆಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಈ ಸಂಘಟನೆಗಳನ್ನು ನಿಷೇಧಿಸಿ ಎಂದು ಮೊದಲೇ ಹೇಳಿದ್ದೇವು. ಆದರೆ ಈ ಸಂಘಟನೆಗಳನ್ನು ನಿಷೇಧ ಮಾಡಲು ಸರ್ಕಾರ ತಯಾರಿಲ್ಲ. ಈ ಸಂಘಟನೆಗಳನ್ನು ನಿಷೇಧ ಮಾಡಲು ನಮ್ಮ ಬೆಂಬಲ ಯಾವತ್ತೂ ಇರಲಿದೆ ಎಂದರು.
ಇಂದು ಕರ್ನಾಟಕ ಸೇರಿದಂತೆ ದೇಶಾದ್ಯಂತ 10 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಪಿಎಫ್ ಐ, ಎಸ್ ಡಿಪಿಐ ಸಂಘಟನೆಗಳ ಕಚೇರಿಗಳ ಎನ್ ಐಎ ದಾಳಿ ಮಾಡಿದ್ದು, 100 ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದ ಸಂದರ್ಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.