ಬೆಂಗಳೂರು : ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದು, ಅಂಕಿತ ಹಾಕಿದ್ದಾರೆ.
ಇತ್ತೀಚೆಗೆ ಸಚಿವ ಬಿ.ಸಿ ನಾಗೇಶ ವಿಧೇಯಕ ಮಂಡಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮಕ ಹಾಗೂ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದಿದ್ದರು.
ಈ ಎರಡು ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಾಗುವುದು. ಅದೇ ರೀತಿ ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾರ್ಪಡುಗಳಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದರು.
ಈ ಮೂಲಕ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿ ಜಾರಿಗೆ ತರಲು ನಿರ್ಧರಿಸಲಾಗಿದೆ.