ಬೆಂಗಳೂರು : ಕಳೆದೆರಡು ದಿನದಿಂದ ಭಾರೀ ಚರ್ಚೆಯಾಗುತ್ತಿರುವ ಪೇ ಸಿಎಂನ್ನು ಅಭಿಯಾನವನ್ನು ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ.
ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ ಪೇ ಸಿಎಂ ಪೇ- ಟು ಚೀಫ್ ಮಿನಿಸ್ಟರ್ ರಿಲೀಫ್ ಫಂಡ್ ಎಂಬ ಡಿಜಿಟಲ್ ಆಯಪ್ ಅಭಿವೃದ್ಧಿಪಡಿಸಿ ಈ ಮೂಲಕ ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ. ಈ ಮೂಲಕ ಸರ್ಕಾರದ ವಿರುದ್ಧದ ಅಭಿಯಾನವನ್ನು ರಾಜ್ಯ ಸರ್ಕಾರ ಪಾಸಿಟಿವ್ ಆಗಿ ತೆಗೆದುಕೊಳ್ಳಲಿದೆ ಎನ್ನಲಾಗಿದೆ.
ಈ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾರ್ವಜನಿಕರು, ಸಂಘ ಸಂಸ್ಥೆಗಳು ನೆರವು ನೀಡಲು ಸಹಾಯವಾಗುವಂತೆ ಮಾಡಬಹುದು ಎಂದು ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ ಎನ್ನಲಾಗಿದೆ.