ಕಾಡಾನೆ ಪ್ರತ್ಯಕ್ಷ: ಶಾಲೆಗಳಿಗೆ ರಜೆ, ಸಂತೆ ರದ್ದು

A B Dharwadkar
ಕಾಡಾನೆ ಪ್ರತ್ಯಕ್ಷ:  ಶಾಲೆಗಳಿಗೆ ರಜೆ, ಸಂತೆ ರದ್ದು

ಕುಂದಾಪುರ : ಮಂಗಳವಾರದಿಂದ ಹೊಸಂಗಡಿ, ಸಿದ್ದಾಪುರ ಭಾಗದಲ್ಲಿ ಕಾಡಾನೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ದಿನಾಂಕ 04/06/2025 ರಂದು ನಡೆಯಬೇಕಿದ್ದ ಸಿದ್ದಾಪುರ ಸಂತೆಯನ್ನು ರದ್ದುಪಡಿಸಲಾಗಿದೆ.

ಸಿದ್ದಾಪುರ, ಹೊಸಂಗಡಿ ಮತ್ತು ಕಮಲಶಿಲೆ ಗ್ರಾಮಗಳ ವ್ಯಾಪ್ತಿಯ ಎಲ್ಲ ಅಂಗನವಾಡಿ ಕೇಂದ್ರಗಳು, ಶಾಲೆಗಳು ಮತ್ತು ಪ್ರೌಢಶಾಲಾ ವಿಭಾಗಕ್ಕೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ.

ಕಳೆದ ಎರಡು ದಿನಗಳಿಂದ ಆನೆ ಈ ಪ್ರದೇಶದಲ್ಲಿ ಓಡಾಡುತ್ತಿದ್ದು ಸಾಕಿದ ಆನೆಗಳನ್ನು ತರಿಸಿ ಸೆರೆ ಹಿಡಿಯುವ ಪ್ರಯತ್ನ ನಡೆಸಲಾಗುತ್ತಿದೆ.

ಸಾರ್ವಜನಿಕರು ಭಯಭೀತರಾಗದೇ ಜಾಗರೂಕತೆಯಿಂದ ಓಡಾಡಬೇಕು ಎಂದು ತಾಲೂಕು ಆಡಳಿತ ಪ್ರಕಟಣೆ ನೀಡಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.