ವಿಜಯಪುರ: ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದರೆ ಅದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರನಿಂದ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ ಆರೋಪ ಮಾಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ವಿಜಯೇಂದ್ರನಿಂದ ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆ. ಇಲ್ಲದಿದ್ದರೆ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲೇ ಮುಂದುವರಿಯುತ್ತಿದ್ದರು.
ವಿಜಯೇಂದ್ರ ಹಗರಣ ಮಾಡಿದಾಗಲೆಲ್ಲ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು. ವಿಜಯೇಂದ್ರ ಭ್ರಷ್ಟಾಚಾರದಿಂದ ಬಿಜೆಪಿ ಪಕ್ಷದ ಹೆಸರು ಕೆಟ್ಟಿದೆ. ಯಡಿಯೂರಪ್ಪ ಜೈಲಿಗೆ ಹೋಗಿ ಬರಲು ವಿಜಯೇಂದ್ರ ಕಾರಣ. ಮಗನ ಮಾತು ಕೇಳಿ ಅಧಿಕಾರ ನಡೆಸಬಾರದು. ಬಿ ಎಸ್ ಯಡಿಯೂರಪ್ಪ ಒಳ್ಳೆಯವರು ಎಂದು ಹೇಳಿದ್ದಾರೆ.