ನಿಮಗೆ 20 ಕೋಟಿ, ಬೇರೆಯವರನ್ನು ತಂದರೆ 25 ಕೋಟಿ : ಬಿಜೆಪಿ ಆಫರ್ ಎಂದ ಆಪ್

A B Dharwadkar
ನಿಮಗೆ 20 ಕೋಟಿ, ಬೇರೆಯವರನ್ನು ತಂದರೆ 25 ಕೋಟಿ  : ಬಿಜೆಪಿ ಆಫರ್ ಎಂದ ಆಪ್
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಹೊಸದಿಲ್ಲಿ: ಆಮ್ ಆದ್ಮಿ ಪಕ್ಷವು ಕೇಂದ್ರ ಸರ್ಕಾರವನ್ನು ಇಂದು ತರಾಟೆಗೆ ತೆಗೆದುಕೊಂಡಿದ್ದು, ದೆಹಲಿ ಸರ್ಕಾರವನ್ನು ಕುತಂತ್ರದಿಂದ ಬೀಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.

ಬಿಜೆಪಿ ತನ್ನ ನಾಯಕರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಪಕ್ಷ ಆರೋಪಿಸಿದೆ. ಎಎಪಿ ಶಾಸಕರಿಗೆ ನಗದು ಮತ್ತು ಬೆದರಿಕೆಯ ಆಮಿಷ ಒಡ್ಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿಯನ್ನು ಐವರು ಹಿರಿಯ ಆಪ್ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದ್ದಾರೆ.

ಬಿಜೆಪಿಯು ಈ ಆರೋಪವನ್ನು ನಿರಾಕರಿಸಿದೆ ಮತ್ತು ದೆಹಲಿಯ ಉಪಮುಖ್ಯಮಂತ್ರಿ ಮನೀಶ ಸಿಸೋಡಿಯಾ ಇತ್ತೀಚೆಗೆ ಕೇಂದ್ರೀಯ ತನಿಖಾ ದಳ ದಾಳಿ ನಡೆಸಿದ ಮದ್ಯ ನೀತಿಯಲ್ಲಿನ ಭ್ರಷ್ಟಾಚಾರದ ಸುತ್ತಲಿನ ಪ್ರಶ್ನೆಗಳಿಂದ ಜನರು ವಿಮುಖಗೊಳ್ಳುವಂತೆ ಮಾಡಲು ಎಎಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.

ಎಎಪಿಯ ರಾಷ್ಟ್ರೀಯ ವಕ್ತಾರ ಮತ್ತು ರಾಜ್ಯಸಭಾ ಸಂಸದ ಸಂಜಯ ಸಿಂಗ್ ಅವರು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೆಹಲಿಯಲ್ಲಿ ಎಎಪಿ ಸರ್ಕಾರವನ್ನು ಉರುಳಿಸಲು ಕೇಂದ್ರ ಏಜೆನ್ಸಿಗಳನ್ನು ಹೇಗೆ ಬಳಸಿಕೊಳ್ಳುತ್ತಿದೆ ಎಂಬುದನ್ನು ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.

ದೆಹಲಿಯ ಶಾಸಕರನ್ನು ಒಡೆಯುವ ಪ್ರಯತ್ನಗಳು ಪ್ರಾರಂಭವಾಗಿವೆ. ದೆಹಲಿ ಉಪಮುಖ್ಯಮಂತ್ರಿ ಮನೀಶ ಸಿಸೋಡಿಯಾ ಮೇಲೆ ಮಹಾರಾಷ್ಟ್ರದ ಶಿಂಧೆ ರೀತಿಯಲ್ಲಿ ಪ್ರಯತ್ನಿಸಿತು. ಆದರೆ ಪ್ರಯತ್ನ ವಿಫಲವಾಯಿತು ಎಂದು ಆರೋಪಿಸಿದರು.

ಬಿಜೆಪಿ ಸದಸ್ಯರು ಎಎಪಿ ಶಾಸಕರಿಗೆ ಬೆದರಿಕೆ ಹಾಕುತ್ತಿದ್ದಾರೆ. ನಮ್ಮ 20 ಕೋಟಿಯ ಆಫರ್ ತೆಗೆದುಕೊಳ್ಳಿ ಅಥವಾ ಸಿಸೋಡಿಯಾ ಅವರಂತೆ ಸಿಬಿಐ ಪ್ರಕರಣಗಳನ್ನು ಎದುರಿಸಿ ಎಂದು ಅವರು ಬೆದರಿಸುತ್ತಾರೆ ಎಂದು ಆರೋಪಿಸಿದರು.

ಶಾಸಕರಾದ ಅಜಯ ದತ್, ಸಂಜೀವ ಝಾ, ಸೋಮನಾಥ ಭಾರತಿ ಮತ್ತು ಕುಲದೀಪ ಕುಮಾರ ಅವರನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಸಂಪರ್ಕಿಸಿದ್ದಾರೆ. ಅವರು ಪಕ್ಷಕ್ಕೆ ಸೇರಿದರೆ ತಲಾ 20 ಕೋಟಿ ಮತ್ತು ಇತರ ಶಾಸಕರನ್ನು ತಮ್ಮೊಂದಿಗೆ ಕರೆತಂದರೆ 25 ಕೋಟಿ ನೀಡಲಾಗುವುದು ಆಮಿಷ ಒಡ್ಡಿದ್ದಾರೆ ಎಂದು ಸಿಂಗ್ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಇತರ ನಾಲ್ವರು ಎಎಪಿ ಶಾಸಕರು ತಮ್ಮನ್ನು ಬಿಜೆಪಿ ನಾಯಕರು ತಮ್ಮನ್ನು ಹೇಗೆ ಸಂಪರ್ಕಿಸಿದರು ಎಂದು ವಿವರಿಸಿದರು.

ಸಿಸೋಡಿಯಾ ವಿರುದ್ಧದ ಪ್ರಕರಣಗಳು ನಕಲಿ ಎಂದು ನಮಗೆ ತಿಳಿದಿದೆ. ಆದರೆ ಹಿರಿಯ ನಾಯಕರು ಎಎಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ನಿರ್ಧರಿಸಿದ್ದಾರೆ. ಬಿಜೆಪಿಯ ನಾಯಕರಿಗೆ ಎಎಪಿ ನಾಯಕರನ್ನು ಸೆಳೆಯುವ ಕರ್ತವ್ಯವನ್ನು ನೀಡಲಾಗಿದೆ ಎಂದು ಸೋಮನಾಥ ಭಾರತಿ ಹೇಳಿದರು. ಏನೇ ಆಗಲಿ ನಾವು ದೆಹಲಿ ಸರ್ಕಾರವನ್ನು ಉರುಳಿಸುತ್ತೇವೆ ಎಂದು ಬಿಜೆಪಿ ನಾಯಕರೊಬ್ಬರು ನನಗೆ ಹೇಳಿದರು ಎಂದು ಅವರು ಹೇಳಿದರು.

ಎಎಪಿ ಶಾಸಕರು ಮತ್ತು ಸಿಸೋಡಿಯಾ ಬಿಜೆಪಿಯ ಆಪರೇಷನ್ ಕಮಲವನ್ನು ಆಪರೇಷನ್ ಬೋಗಸ್ ಆಗಿ ಪರಿವರ್ತಿಸುತ್ತಿದ್ದಾರೆ ಎಂದು ಸಂಜಯ ಸಿಂಗ್ ಹೇಳಿದ್ದಾರೆ.

ಪ್ರಧಾನಿ ಮೋದಿಗೆ ಸವಾಲೆಸೆದ ಸಂಜಯ ಸಿಂಗ್, ನೀವು ಅನೇಕ ರಾಜ್ಯಗಳಲ್ಲಿ ಸರ್ಕಾರಗಳನ್ನು ಬೆದರಿಸಿ ಬೀಳಿಸಿದ್ದೀರಿ, ಆದರೆ ಇದು ದೆಹಲಿ, ಜನರು ಇಲ್ಲಿ ಕೇಜ್ರಿವಾಲ್ ಅವರನ್ನು ಮೂರು ಬಾರಿ ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು.

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿಯ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಟ್ವಿಟರ್‌ನಲ್ಲಿ, ಇದು ಬಹಳ ಗಂಭೀರ ವಿಷಯ ಮತ್ತು ಪರಿಸ್ಥಿತಿಯ ಅವಲೋಕನಕ್ಕಾಗಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯ (ಪಿಎಸಿ) ಸಭೆಯನ್ನು ಸಂಜೆ 4 ಗಂಟೆಗೆ ತಮ್ಮ ನಿವಾಸದಲ್ಲಿ ಕರೆಯಲಾಗಿದೆ ಎಂದು ಹೇಳಿದ್ದಾರೆ.

ಎಎಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ವಕ್ತಾರ ಶೆಹಜಾದ ಪೂನವಾಲಾ, ಕೇಜ್ರಿವಾಲ್ ಅವರ ಪಕ್ಷವು ಟ್ರೇಲರ್‌ಗಳನ್ನು ಬಿಡುಗಡೆ ಮಾಡುತ್ತಲೇ ಇರುತ್ತದೆ ಆದರೆ ಚಲನಚಿತ್ರ ಎಂದಿಗೂ ಬರುವುದಿಲ್ಲ ಎಂದು ಟೀಕಿಸಿದರು.

ತಮ್ಮ ಪಕ್ಷವನ್ನು ಒಡೆಯಲಾಗುತ್ತಿದೆ ಎಂದು ಅವರು ದೂರುತ್ತಾರೆ, ಆಪಾದಿತ ಬಿಜೆಪಿ ಪ್ರಸ್ತಾಪದ ಕುರಿತು ತಮ್ಮ ಬಳಿ ಆಡಿಯೊ ಕ್ಲಿಪ್‌ಗಳಿವೆ ಎಂದು ಹೇಳುತ್ತಾರೆ. ಆದರೆ ಅದನ್ನು ಬಿಡುಗಡೆ ಮಾಡುವುದಿಲ್ಲ ಮತ್ತು ಸರಿಯಾದ ಸಮಯಕ್ಕಾಗಿ ಕಾಯುತ್ತೇವೆ ಎಂದು ಹೇಳುತ್ತಾರೆ. ಅವರು ಇದನ್ನು ಮಾಡುತ್ತಲೇ ಇರುತ್ತಾರೆ. ಈಗ ದೆಹಲಿ ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪಗಳಿಂದ ದೂರ ಸರಿಯಲು ಹೊಗೆ ಪರದೆ ಬಿಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.