ಗೋವಾ ಕಡೆ ಹೋಗುವವರಿಗೆ ಪೊಲೀಸರ ಮಹತ್ವದ ಸೂಚನೆ

A B Dharwadkar
ಗೋವಾ ಕಡೆ ಹೋಗುವವರಿಗೆ ಪೊಲೀಸರ ಮಹತ್ವದ ಸೂಚನೆ

ಬೆಳಗಾವಿ : ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ನದಿಗಳು ತುಂಬಿ ಹರಿಯುತ್ತಿದ್ದು ಹಲವೆಡೆ ಸೇತುವೆಗಳು ಶಿಥಿಲಗೊಂಡಿವೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಂಚಾರ ಮಾರ್ಗ ಬದಲಿಸಲಾಗಿದೆ.

ಜಾಂಬೋಟಿ ಹಾಗೂ ಚೋರ್ಲಾ ಪ್ರದೇಶ ವ್ಯಾಪ್ತಿಗಳಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ಸೇತುವೆಗಳು ಶಿಥಿಲಗೊಂಡಿದ್ದು ಸುರಕ್ಷತೆ ದೃಷ್ಟಿಯಿಂದ ಸಂಚಾರ ಮಾರ್ಗ ಬದಲಿಸಲಾಗಿದೆ.

ಬೆಳಗಾವಿ ನಗರದಿಂದ ಜಾಂಬೋಟಿ-ಚೋರ್ಲಾ ಮಾರ್ಗವಾಗಿ ಗೋವಾ ಕಡೆಗೆ ಸಂಚರಿಸುವ ಎಲ್ಲಾ ಭಾರಿ ವಾಹನಗಳು ಪೀರನವಾಡಿ ಕ್ರಾಸ್ ಹತ್ತಿರ ಎಡ ತಿರುವು ಪಡೆದುಕೊಂಡು ಖಾನಾಪುರ ಮಾರ್ಗವಾಗಿ ಸಂಚರಿಸುವಂತೆ ಕೋರಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.