ಜಿಲ್ಲಾಸ್ಪತ್ರೆಯ ಮಕ್ಕಳತಜ್ಞ ವೈದ್ಯರ ಅಪಹರಣ : ₹ 3 ಕೋಟಿ ಬೇಡಿಕೆ

A B Dharwadkar
ಜಿಲ್ಲಾಸ್ಪತ್ರೆಯ ಮಕ್ಕಳತಜ್ಞ ವೈದ್ಯರ ಅಪಹರಣ : ₹ 3 ಕೋಟಿ ಬೇಡಿಕೆ

ಬಳ್ಳಾರಿ : ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ ಅವರನ್ನು ಅಪಹರಿಸಲಾಗಿದೆ. ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೈಶ್ವರ ದೇವಸ್ಥಾನದ ಬಳಿ ಶನಿವಾರ ಮುಂಜಾನೆ ಅವರು ವಾಕಿಂಗ್ ಮಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಅಪಹರಣ ಮಾಡಿದ್ದು, ಅಪಹರಣಕಾರರು ಮೂರು ಕೋಟಿ ರೂ.ಗಳ ಹಣದ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ಅಪಹರಣಕಾರರು, ವೈದ್ಯರ ಬಾಯಿಮುಚ್ಚಿ ಕಾರಿನಲ್ಲಿ ಕೂಡ್ರಿಸಿಕೊಂಡು ಹೋಗಿದ್ದಾರೆ ಎಂದು ಹೇಳಲಾಗಿದೆ. ಅವರ ಸಹೋದರ ಹಾಗೂ ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರಾಗಿರುವ ವೇಣು ಅವರಿಗೆ ಅಪಹರಣಕಾರರು ಕರೆ ಮಾಡಿದ್ದು, ಹಣದ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿದ್ದು, ಅಪಹರಣಕಾರರ ಪತ್ತೆಗೆ ಬಲೆ ಬೀಸಿದ್ದಾರೆ. ಅಪಹರಣಕ್ಕೊಳಗಾದ ಡಾ.ಸುನೀಲ ಅವರ ಮೊಬೈಲನಿಂದಲೇ ಕರೆ ಮಾಡುತ್ತಿರುವ ಅಪಹರಣಕಾರರು ಮೂರು ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಬಳ್ಳಾರಿ ಜಿಲ್ಲಾ ಪೊಲೀಸ ವರಿಷ್ಠರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದ್ದು, ಶೋಧ ಕಾರ್ಯ ನಡೆದಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.