ಬೆಳಗಾವಿ: ಅಕಾಲಿಕ ಹೃದಯಾಘಾತದಿಂದ ನಿಧನರಾದ ಅರಣ್ಯ ಸಚಿವ ಉಮೇಶ ಕತ್ತಿ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯ ಉಮೇಶ ಕತ್ತಿ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಸಹೋದರ ರಮೇಶ ಕತ್ತಿ ಅವರಿಗೆ ಸಾಂತ್ವನ ಹೇಳಿದರು.
ಉಮೇಶ ಕತ್ತಿ ಒಬ್ಬ ಸರಳ ವ್ಯಕ್ತಿತ್ವದ ಮನುಷ್ಯ. ಅಧಿಕಾರದಲ್ಲಿ ಇರಲಿ ಅಥವಾ ಇಲ್ಲದಿರಲಿ ಅವರು ಯಾವತ್ತೂ ಬದಲಾಗಲಿಲ್ಲ.ಯಾವುದೇ ಸಂಕಷ್ಟದ ಪರಿಸ್ಥಿತಿ ಬಂದರೂ, ಹಾಸ್ಯದ ಮೂಲಕ ಅದನ್ನು ತಿಳಿಗೊಳಿಸುವ ಶಕ್ತಿ ಇವರಿಗಿತ್ತು. ಉತ್ತರ ಕರ್ನಾಟಕದ ಗಟ್ಟಿ ಧ್ವನಿ ನಮ್ಮೆಲ್ಲರನ್ನು ಬಿಟ್ಟು ಹೋಗಿದ್ದು ನೋವಿನ ಸಂಗತಿ ಬೇಸರ ವ್ಯಕ್ತಪಡಿಸಿದರು.