LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸೂರ್ಯಕಾಂತಿ ಖರೀದಿಗೆ ಬೆಂಬಲ ಬೆಲೆ ಘೋಷಣೆ

ಬೆಂಗಳೂರು, ಮೇ 8 : ಬೆಂಬಲ ಬೆಲೆ ಯೋಜನೆಯಡಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಬೆಳೆಯನ್ನು ಪ್ರತಿ ಕ್ವಿಂಟಾಲ್‌ಗೆ 7,721 ರೂ. ದರದಲ್ಲಿ ಖರೀದಿಸಲು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ, ರಾಯಚೂರು ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ತೆರೆಯಲು ಸೂಚನೆ ನೀಡಲಾಗಿದೆ.

ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಗಳಾಗಿ ನಾಫೆಡ್‌ ಮತ್ತು ಎನ್‌ಸಿಸಿಎಫ್‌ ಸಂಸ್ಥೆಗಳನ್ನು ನೇಮಕ ಮಾಡಲಾಗಿದ್ದು, ರಾಜ್ಯ ಸರ್ಕಾರದ ಖರೀದಿ ಸಂಸ್ಥೆಯಾಗಿ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳವನ್ನು ನೇಮಿಸಲಾಗಿದೆ.

ರೈತರ ನೋಂದಣಿ ಅವಧಿಯನ್ನು 50 ದಿನ ಹಾಗೂ ಖರೀದಿ ಅವಧಿಯನ್ನು 60 ದಿನ ನಿಗದಿಪಡಿಸಲಾಗಿದೆ. ನೋಂದಣಿಯೊಂದಿಗೆ ಖರೀದಿ ಪ್ರಕ್ರಿಯೆಯನ್ನೂ ಆರಂಭಿಸಬೇಕು ಎಂದು ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯ ಹೊಂದಿರುವ ಗೋದಾಮುಗಳಿರುವ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಸಚಿವರು ತಿಳಿಸಿದ್ದಾರೆ.

ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ರೈತರ ಹೆಸರಿನಲ್ಲಿ ವರ್ತಕರು ಹಾಗೂ ಖರೀದಿ ಸಂಸ್ಥೆಗಳು ಬೆಂಬಲ ಬೆಲೆ ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.

ಖರೀದಿ ಪ್ರಗತಿಯ ಮಾಹಿತಿಯನ್ನು ಪ್ರತಿದಿನ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸತೀಶ ಜಾರಕಿಹೊಳಿ ಭಾಮೈದ ಮಂಜುನಾಥಗೆ ಈಡಿ ಬಿಗ್ ಶಾಕ್: ಆರು ಕಡೆ ಏಕಕಾಲದ ದಾಳಿಹಸೆಮಣೆ ಏರಬೇಕಿದ್ದ ಯುವತಿ, ತಂದೆ-ತಾಯಿ ಆತ್ಮಹತ್ಯೆದುಡ್ಡು ಕೊಟ್ಟು ಖರೀದಿಸಿ ತಂದ 17 ಕಾಂಗ್ರೆಸ್‌ ಶಾಸಕರಿಂದಲೇ ಬಿಜೆಪಿ ಹಾಳಾಯ್ತು : ಈಶ್ವರಪ್ಪ ಬಾಂಬ್ಕನ್ನಡ ಆದೇಶ ಹರಿದು ಎಂಇಎಸ್‌ ಪುಂಡಾಟ: ಬೆಳಗಾವಿಯಲ್ಲಿ ಮತ್ತೆ ನಾಡದ್ರೋಹಿ ಘೋಷಣೆಮೊಸರು ಪ್ಯಾಕೆಟನಲ್ಲಿ ಸತ್ತ ಇಲಿ ಮರಿ ಪತ್ತೆ!ಅಶ್ಲೀಲ ವಿಡಿಯೋಗಳ ವೀಕ್ಷಣೆ ; 9 ತಿಂಗಳ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 12 ವರ್ಷದ ಬಾಲಕ!ನೀಟ್‌ ಮರುಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲಯುವತಿಯೊಂದಿಗೆ ಹೊಟೇಲ್‌ಗೆ ತೆರಳಿದ್ದ ಯುವಕನ ಮೇಲೆ ಹಲ್ಲೆಮುತಗಾದ 300 ವರ್ಷದ ಬಾವಿ ಪುನರುಜ್ಜೀವನಗೊಳಿಸಿದ ಪ್ಯಾಸ್ ಫೌಂಡೇಶನ್ಬುರ್ಖಾ ಅವನತಿಯ ಸಂಕೇತ : ಇಮ್ತಿಯಾಜ ಅಲಿ