LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ ವಲಯ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಹುಬ್ಬಳ್ಳಿ, ಮೇ 8 : ಇ-ಸ್ವತ್ತು ಹಾಗೂ ಭೂ ದಾಖಲೆಗಳ ವರ್ಗಾವಣೆ ಪ್ರಕ್ರಿಯೆಯಲ್ಲಿ ವಿಳಂಬ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಕೈಗೊಂಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಒಟ್ಟು 12 ವಲಯ ಕಚೇರಿಗಳ ಮೇಲೆ ಪ್ರತ್ಯೇಕ ತಂಡಗಳು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿವೆ. ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಎಸ್.ಟಿ. ನೇತೃತ್ವದಲ್ಲಿ 12 ತಂಡಗಳನ್ನು ರಚಿಸಿ ಪರಿಶೀಲನೆ ನಡೆಸಲಾಗುತ್ತಿದೆ.

ಇ-ಸ್ವತ್ತು ಹಾಗೂ ಇತರ ದಾಖಲೆಗಳನ್ನು ಮಾಡಿಕೊಡುವಲ್ಲಿ ಅನಗತ್ಯ ವಿಳಂಬ ಮಾಡಲಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬಂದಿದ್ದವು. ಹಣ ನೀಡಿದರೆ ಮಾತ್ರ ಇ-ಸ್ವತ್ತು ನೀಡಲಾಗುತ್ತಿದೆ, ಇಲ್ಲವಾದರೆ ಕಡತಗಳನ್ನು ಬಾಕಿ ಇಡಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದರು.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ವಿವಿಧ ಕಡತಗಳು, ಅರ್ಜಿಗಳು ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕಾರ್ಯಾಚರಣೆ ವೇಳೆ ಕಚೇರಿಗಳಲ್ಲಿದ್ದ ಸಿಬ್ಬಂದಿಯಿಂದಲೂ ಮಾಹಿತಿ ಪಡೆಯಲಾಗುತ್ತಿದ್ದು, ದೂರುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯ ಸರ್ಕಾರದ ವೈಫಲ್ಯ ಬಯಲಿಗೆಳೆಯಲು ಸೆ. 1ರಿಂದ ಬಿಜೆಪಿ ಪಾದಯಾತ್ರೆ: ವಿಜಯೇಂದ್ರಜನರ ಆರೋಗ್ಯಕ್ಕಿಂತ ಆಹಾರ ಕಂಪನಿಗಳ ಲಾಬಿ ಮೇಲು! ‘ರೆಡ್‌ ಅಲರ್ಟ್‌’ ಲೇಬಲ್‌ ಪ್ರಸ್ತಾವದಿಂದ ಹಿಂದೆ ಸರಿದ ಸರ್ಕಾರಎಸ್‌ಐಆರ್‌ ಕರಡು ಪಟ್ಟಿಗೆ ನಾಗರಿಕ ಸಂಘಟನೆಗಳ ವಿರೋಧ; ಸೆಪ್ಟೆಂಬರ್‌ 1ರಂದು ಚುನಾವಣಾ ಆಯೋಗ ಚಲೋಅವಧಿ ಮೀರಿದ ಚಾಕೊಲೇಟ್‌ಗಾಗಿ ಕಸದ ರಾಶಿಗೆ ಮುಗಿಬಿದ್ದ ಜನ; ವಿಡಿಯೊ ವೈರಲ್ಅತ್ಯಾಚಾರಿ ಗುರ್ಮೀತ್ ಸಿಂಗ್‌ಗೆ ಮತ್ತೆ ಪೆರೋಲ್; 17ನೇ ಬಾರಿ ಜೈಲಿನಿಂದ ಹೊರಗೆಆಹಾರ ಧಾನ್ಯವನ್ನು ಕಡಿಮೆ ದರದಲ್ಲಿ ನೀಡಿ ಎಥೆನಾಲ್‌ ಖರೀದಿ: ಕೇಂದ್ರದ ವಿಚಿತ್ರ ನೀತಿಗೆ ಪ್ರಿಯಾಂಕ್‌ ಖರ್ಗೆ ಪ್ರಶ್ನೆಪಾಟ್ನಾದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ: ಪೊಲೀಸರೊಂದಿಗೆ ಘರ್ಷಣೆಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್’ ಸೀರತ್ ಅಭಿಯಾನದೆಹಲಿಯಲ್ಲಿ ರಸ್ತೆ ಅಪಘಾತ: ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಸೇರಿ ಆರು ಮಂದಿಗೆ ಗಾಯಶಾಲೆ ಸರಿಪಡಿಸುವ ಹೋರಾಟಕ್ಕೆ ಹಿಂಸೆಯ ಉತ್ತರ! ರಾಜಸ್ಥಾನದಲ್ಲಿ ಸಿಜೆಪಿ ತಂಡದ ಮೇಲೆ ದಾಳಿ