ಬೆಂಗಳೂರು, ಮೇ 20 : ಚಿನ್ನ ಖರೀದಿಸಬೇಡಿ, ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ಇತರ ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯನ್ನು ಮಿತಿಗೊಳಿಸಿ, ವಿದೇಶ ಪ್ರವಾಸ ಕಡಿಮೆ ಮಾಡಿ ಹಾಗೂ ಮನೆಯಿಂದಲೇ ಕೆಲಸ ಮಾಡುವ ಪದ್ಧತಿಯನ್ನು ರೂಢಿಸಿಕೊಳ್ಳಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಅಣಕಿಸಿ ನಟ ಕಿಶೋರ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಫೇಸ್ಬುಕ್ನಲ್ಲಿ ಪೋಸ್ಟ ಮಾಡಿರುವ ಅವರು, ಮುಂದಿನ ಪ್ರಕಟಣೆಯಲ್ಲಿ ಈ ನಾನ್-ಬಯಲಾಜಿಕಲ್ ಸರ್ಕಾರವು ಹಸ್ದೇವ್ನಿಂದ ನಿಕೋಬಾರವರೆಗೆ ಕಾಡುಗಳನ್ನು ಮಿಸ್ಟರ್ ಎ ಗೆ ಮಾರಾಟ ಮಾಡುವಲ್ಲಿ ನಿರತವಾಗಿದ್ದು, ಭಾರತವನ್ನು ವಿಶ್ವದ ಅತ್ಯಂತ ಕಲುಷಿತ ದೇಶವನ್ನಾಗಿ ಮಾಡಿ, ಮಾಲಿನ್ಯವನ್ನು ನಿಭಾಯಿಸಲು ಅಸಮರ್ಥವಾಗಿರುವುದರಿಂದ ಸಾರ್ವಜನಿಕರು 25 ಶೇಕಡಾ ಉಸಿರಾಟವನ್ನು ಕಡಿಮೆ ಮಾಡಿ ದೇಶಭಕ್ತಿಯನ್ನು ಪ್ರದರ್ಶಿಸಬೇಕು ಎಂದು ಹೇಳಬಹುದು ಎಂದು ವ್ಯಂಗ್ಯವಾಡಿದ್ದಾರೆ.
ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಕಿಶೋರ ಮಾಡಿರುವ ಈ ಪೋಸ್ಟಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.