ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಳೆಗೆ ಬೆಳಗಾವಿ ಜಿಲ್ಲೆಯಲ್ಲಿ 2ನೇ ಸಾವು

ಬೆಳಗಾವಿ : ಕಳೆದ ಹತ್ತು ದಿನಗಳಿಂದ ಜಿಲ್ಲೆಯ ಕೆಲವು ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಈ ವರೆಗೆ ಇಬ್ಬರು ಬಲಿಯಾಗಿದ್ದಾರೆ. ತುಂತುರು ಮಳೆಗೆ ನೆನೆದಿದ್ದ ಮನೆಯ ಗೋಡೆ ಕುಸಿದು 23-ವರುಷದ ವ್ಯಕ್ತಿ ಅಸುನೀಗಿದ ಘಟನೆ ಅಥಣಿ ಪಟ್ಟಣದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.

ಅಥಣಿ ಪಟ್ಟಣದ ತಾಸೆ ಗಲ್ಲಿಯ ನಿವಾಸಿ ಕಾಶಿನಾಥ ಅಪ್ಪಾಸಾಬ ಸುತಾರ ಮೃತರಾದವರು. ಮಲಗಿದ್ದಾಗ ಮನೆಯ ಗೋಡೆಯ ಕುಸಿದು ಕಲ್ಲು ಮಣ್ಣು ಬಿದ್ದು ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ತೆರಳಿ ಪರಿಶೀಲನೆ ಮಾಡಿದರು. ಅಥಣಿ ಶಾಸಕರ ಪರವಾಗಿ ಮುಖಂಡ‌ ಚಿದಾನಂದ ಸವದಿ ಭೇಟಿ ನೀಡಿ ಸಾಂತ್ವಾನ ಹೇಳಿದರು.

ಕಳೆದ ಸೋಮವಾರ ರಾತ್ರಿ ಬೈಲಹೊಂಗಲ ತಾಲ್ಲೂಕಿನ ಬುಡರಕಟ್ಟಿ ಗ್ರಾಮದ ಮನೆ ಕುಸಿದು 15-ಜನ ಗಾಯಗೊಂಡಿದ್ದರು. ಗಾಯಗೊಂಡಿದ್ದ 95-ವರುಷದ ಈರಮ್ಮ ಪತ್ರೆಯವರ ಎಂಬವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ ಸಾವಿಗೀಡಾಗಿದ್ದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.