LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಮಳೆಗೆ ಬೆಳಗಾವಿ ಜಿಲ್ಲೆಯಲ್ಲಿ 2ನೇ ಸಾವು

ಬೆಳಗಾವಿ : ಕಳೆದ ಹತ್ತು ದಿನಗಳಿಂದ ಜಿಲ್ಲೆಯ ಕೆಲವು ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಈ ವರೆಗೆ ಇಬ್ಬರು ಬಲಿಯಾಗಿದ್ದಾರೆ. ತುಂತುರು ಮಳೆಗೆ ನೆನೆದಿದ್ದ ಮನೆಯ ಗೋಡೆ ಕುಸಿದು 23-ವರುಷದ ವ್ಯಕ್ತಿ ಅಸುನೀಗಿದ ಘಟನೆ ಅಥಣಿ ಪಟ್ಟಣದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.



ಅಥಣಿ ಪಟ್ಟಣದ ತಾಸೆ ಗಲ್ಲಿಯ ನಿವಾಸಿ ಕಾಶಿನಾಥ ಅಪ್ಪಾಸಾಬ ಸುತಾರ ಮೃತರಾದವರು. ಮಲಗಿದ್ದಾಗ ಮನೆಯ ಗೋಡೆಯ ಕುಸಿದು ಕಲ್ಲು ಮಣ್ಣು ಬಿದ್ದು ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ.



ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ತೆರಳಿ ಪರಿಶೀಲನೆ ಮಾಡಿದರು. ಅಥಣಿ ಶಾಸಕರ ಪರವಾಗಿ ಮುಖಂಡ‌ ಚಿದಾನಂದ ಸವದಿ ಭೇಟಿ ನೀಡಿ ಸಾಂತ್ವಾನ ಹೇಳಿದರು.



ಕಳೆದ ಸೋಮವಾರ ರಾತ್ರಿ ಬೈಲಹೊಂಗಲ ತಾಲ್ಲೂಕಿನ ಬುಡರಕಟ್ಟಿ ಗ್ರಾಮದ ಮನೆ ಕುಸಿದು 15-ಜನ ಗಾಯಗೊಂಡಿದ್ದರು. ಗಾಯಗೊಂಡಿದ್ದ 95-ವರುಷದ ಈರಮ್ಮ ಪತ್ರೆಯವರ ಎಂಬವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ ಸಾವಿಗೀಡಾಗಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ