LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಕಣಕುಂಬಿ ಬಳಿ 400 ಲೀಟರ್ ಗೋವಾ ಮದ್ಯ ವಶ, ಇಬ್ಬರ ಬಂಧನ

ಖಾನಾಪುರ, ಸೆ 11 : (ಸಮದರ್ಶಿ ಸುದ್ದಿ) - ಖಾನಾಪುರ ತಾಲ್ಲೂಕಿನ ಕಣಕುಂಬಿ ಬಳಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 400 ಲೀಟರ್ ಗೋವಾ ಮದ್ಯವನ್ನು ಅಬಕಾರಿ ತನಿಖಾ ಠಾಣೆಯ ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಮದ್ಯ ಸಾಗಣೆಗೆ ಬಳಸಲಾಗುತ್ತಿದ್ದ ವಾಹನವನ್ನೂ ಜಪ್ತಿ ಮಾಡಲಾಗಿದೆ.

ಯರಗಟ್ಟಿ ತಾಲ್ಲೂಕಿನ ಮಾಡಮಗೇರಿ ಗ್ರಾಮದ ಸಿದ್ದಪ್ಪ ಮಾರುತಿ ಬೆಳ್ಳಿಕುಂಪಿ ಹಾಗೂ ಸವದತ್ತಿ ತಾಲ್ಲೂಕಿನ ಕಡಬಿ ಗ್ರಾಮದ ಮಂಜುನಾಥ ಹನಮಂತಪ್ಪ ದೇಸಾಯಿ ಬಂಧಿತರು. ಇವರ ವಿರುದ್ಧ ಖಾನಾಪುರ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ಕಣಕುಂಬಿ ಭಾಗದಲ್ಲಿ ನಿಗಾ ವಹಿಸಿದ್ದರು. ಈ ವೇಳೆ ಅನುಮಾನಾಸ್ಪದವಾಗಿ ಬಂದ ವಾಹನವನ್ನು ತಡೆದು ಪರಿಶೀಲಿಸಿದಾಗ ಸುಮಾರು 400 ಲೀಟರ್ ಗೋವಾ ಮದ್ಯ ಪತ್ತೆಯಾಗಿದೆ. ಕೂಡಲೇ ಮದ್ಯ ಹಾಗೂ ಸಾಗಣೆಗೆ ಬಳಸಿದ್ದ ವಾಹನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಜಪ್ತಿ ಮಾಡಲಾದ ಮದ್ಯ ಹಾಗೂ ವಾಹನದ ಒಟ್ಟು ಅಂದಾಜು ಮೌಲ್ಯ ₹10.4 ಲಕ್ಷ ಎಂದು ಅಬಕಾರಿ ಇಲಾಖೆ ತಿಳಿಸಿದೆ. ಬಂಧಿತರಿಂದ ಮದ್ಯವನ್ನು ಎಲ್ಲಿಂದ ತರಲಾಗಿತ್ತು ಮತ್ತು ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಕುರಿತು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಖಾನಾಪುರದ ಅಬಕಾರಿ ನಿರೀಕ್ಷಕ ಮಲ್ಲೇಶಿ ಉಪ್ಪಾರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ನಿರೀಕ್ಷಕರಾದ ನೂರುಲ್ಲಾ ಖಾನ್, ಬಾಳಗೌಡ ಪಾಟೀಲ ಹಾಗೂ ಸಿಬ್ಬಂದಿ ಗುಂಡು ಪೂಜೇರಿ, ಬಸವರಾಜ ವಿವೇಕಿ, ಪ್ರಕಾಶ ನಂದಿಯವರ ಮತ್ತು ಗೃಹರಕ್ಷಕ ಸಿಬ್ಬಂದಿ ಪಾಲ್ಗೊಂಡಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೊಗರಿಬೇಳೆ ಬೆಲೆ ಏರಿಕೆ: ಕೆಜಿಗೆ ₹10 ಹೆಚ್ಚಳಹೆಸರಿನ ಸಣ್ಣ ವ್ಯತ್ಯಾಸಕ್ಕೂ ನಿವೃತ್ತ ಐಎಎಸ್ ಅಧಿಕಾರಿಗೆ ನೋಟಿಸ್; ಜೈಲು ಶಿಕ್ಷೆ ಎಚ್ಚರಿಕೆಧೀರೇಂದ್ರ ಶಾಸ್ತ್ರಿ ಹೇಳಿಕೆಗೆ ತಿರುಗೇಟು : ದೇವಸ್ಥಾನದಲ್ಲಿ ಮೀನಿನ ಊಟ ಸವಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ!ವರ್ಷಕ್ಕೆ 2 ಸಾವಿರ ಕೋಟಿ ವಹಿವಾಟು ನಡೆಸುವ ನಮ್ಮ ಬಳಿ 2 ಕೋಟಿ ಇದ್ದದ್ದು ದೊಡ್ಡ ಮೊತ್ತವಲ್ಲ : ಸತೀಶ ಜಾರಕಿಹೊಳಿಕಣಕುಂಬಿ ಬಳಿ 400 ಲೀಟರ್ ಗೋವಾ ಮದ್ಯ ವಶ, ಇಬ್ಬರ ಬಂಧನಸತೀಶ ಜಾರಕಿಹೊಳಿ, ಆಪ್ತರ ಮನೆಗಳಲ್ಲಿ ಇಡಿ ಶೋಧ ಅಂತ್ಯಸತೀಶ ಜಾರಕಿಹೊಳಿ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಲಕ್ಷ್ಮಿ ಹೆಬ್ಬಾಳಕರಡಿ.ಕೆ. ಶಿವಕುಮಾರ ತಾಯಿಗೆ ನೋಟಿಸ್ ನೀಡಿಲ್ಲಮತ್ತೆ ಗಾಯಗೊಂಡ ಹರ್ಷಿತ ರಾಣಾ: ಅಫ್ಘಾನಿಸ್ತಾನ ಸರಣಿ, ಏಷ್ಯನ್ ಗೇಮ್ಸ್‌ನಿಂದ ಹೊರಕ್ಕೆಎಸ್‌ಐಆರ್‌ ಅಚ್ಚರಿ: ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!