LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನಾಲ್ಕನೇ ದಿನವೂ ಸತತ ಮಳೆ; ಸಂಪರ್ಕ ಕಳೆದುಕೊಂಡ 50 ಗ್ರಾಮಗಳು

ಬೆಳಗಾವಿ : ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಪಶ್ಚಿಮ ಘಟ್ಟದ ಅಂಚಿನಲ್ಲಿ ಬರುವ ಖಾನಾಪುರ ತಾಲೂಕಿನ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ಸುಮಾರು 50 ಗ್ರಾಮಗಳು ಮುಖ್ಯ ಪಟ್ಟಣಗಳೊಂದಿಗೆ ಸಂಪರ್ಕ ಮತ್ತು ವಿದ್ಯುತ್ ಸಂಪರ್ಕ ಕಳೆದುಕೊಂಡಿವೆ. ಕಡಿಮೆ ಎತ್ತರದ ರಸ್ತೆ ಸೇತುವೆಗಳ ಮೇಲೆ ಸುಮಾರು 5 ಅಡಿಗಳ ವರೆಗೆ ನೀರು ಹರಿಯುತ್ತಿದೆ.



ತಾಲೂಕಿನ ಹಬ್ಬಾನಟ್ಟಿ ಗ್ರಾಮದ ಆಂಜನೇಯ ಮತ್ತು ಇಟಗಿ ಗ್ರಾಮದ ಮರಳು ಶಂಕರ ದೇವಸ್ಥಾನಗಳು ಜಲಾವೃತಗೊಂಡಿವೆ.



ಖಾನಾಪುರ ತಾಲ್ಲೂಕಿನಲ್ಲಿ ಹುಟ್ಟಿರುವ ಮಲಪ್ರಭಾ, ಪಾಂಡರಿ ಮತ್ತು ಮಹದಾಯಿ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ರಸ್ತೆಗಳಲ್ಲಿ ನೀರು ಹರಿಯುತ್ತಿರುವುದರಿಂದ ನಾಗರಗಾಳಿ, ಗುಂಜಿ, ಲೋಂಡಾ, ಹೆಮ್ಮಡಗಾ, ನೆರಸೆ, ನೀಲಾವಡೆ, ಜಂಬೋಟಿ, ಕಣಕುಂಬಿ ಮುಂತಾದ ಪ್ರಮುಖ ಗ್ರಾಮಗಳು ಸೇರಿದಂತೆ ಸುಮಾರು 50 ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ರಸ್ತೆ ಮೇಲೆ ನೀರು ಹರಿಯುತ್ತಿದ್ದು ಹತ್ತಾರು ಬೃಹತ್ ಮರಗಳು ಉರುಳಿ ಬಿದ್ದಿದ್ದು ಅವುಗಳನ್ನು ತೆರವುಗೊಳಿಸಲು ಅಡ್ಡಿಯಾಗುತ್ತಿದೆ.



ಪ್ರಮುಖ ನದಿಗಳಲ್ಲದೇ ಕಳಸಾ-ಬಂಡೂರಿ, ಕೊಟ್ನಿ, ಮಂಗತ್ರಿ, ಪಣಸೇರಿ, ತಟ್ಟಿ, ಕುಂಬಾರ, ಬೈಲ್ ಮುಂತಾದ ಹಳ್ಳಗಳಲ್ಲಿ ನೀರಿನ ಒಳಹರಿವು ಹೆಚ್ಚಿದೆ.



ಮಂಗಳವಾರ ಸಂಜೆಯವರೆಗೆ ಕಣಕುಂಬಿಯಲ್ಲಿ 7.8 ಸೆಮಿ, ಲೋಂಡಾ 3.6, ಗುಂಜಿ 5.3, ಜಂಬೋಟಿ 4.5, ಅಸೊಗಾದಲ್ಲಿ 3.3 ಸೆಮೀ ಮಳೆ ದಾಖಲಾಗಿದೆ. ಈಗ ಆಗುತ್ತಿರುವ ಮಳೆ ಭತ್ತ, ರಾಗಿ, ಗೆಣಸು, ಆಲೂಗಡ್ಡೆ ಬೆಳೆಗಳಿಗೆ ಅನುಕೂಲವಾಗಿದೆ.



ಮಂಗಳವಾರ ಸಂಜೆ ಬೆಳಗಾವಿ-ಪಣಜಿ ರಸ್ತೆ ಮೇಲೆ ಬೃಹತ್ ಗಾತ್ರದ ಮರವುರುಳಿ ರಸ್ತೆ ಸಂಚಾರ ಸುಮಾರು ಎರಡು ತಾಸು ಸ್ಥಗಿತಗೊಂಡಿತ್ತು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ