LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸರಕಾರಿ ಕಚೇರಿಯಲ್ಲಿ ಸಾರಾಯಿ ಪಾರ್ಟಿ ಮಾಡಿದ್ದ 7 ಜನ ಅಮಾನತು

ಬೆಳಗಾವಿ, ಅಕ್ಟೋಬರ 12- ಟಿಳಕವಾಡಿಯಲ್ಲಿರುವ ವ್ಯಾಕ್ಸಿನ್ ಡಿಪೋದ ಆವರಣದಲ್ಲಿನ ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿಯಲ್ಲಿ ಅಲ್ಲಿನ ಸಿಬ್ಬಂದಿ ಕಳೆದ ಮಹಾತ್ಮಾ ಗಾಂಧಿ ಜಯಂತಿ ದಿನದಂದು ಕಚೇರಿಯ ಹಿಂಬದಿಯ ಹಾಲ್ ನಲ್ಲಿ ಮಾಡಿದ್ದಾರೆನ್ನಲಾದ ಮದ್ಯಪಾನ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಏಳು ಸಿಬ್ಬಂದಿಯನ್ನು ಆರೋಗ್ಯ ಇಲಾಖೆ ಅಮಾನತ್ತು ಮಾಡಿದೆ.



ಬೆಳಗಾವಿ ಮುಖ್ಯ ಆರೋಗ್ಯಾಧಿಕಾರಿ ಡಾ.‌ ಮಹೇಶ ಕೋಣಿ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ‌.



ಗಾಂಧಿ ಜಯಂತಿಯ ದಿನದಂದು ಜಿಲ್ಲಾಡಳಿತ ಮದ್ಯ, ಮಾಂಸ ಮಾರಾಟ ನಿಷೇಧ ಮಾಡಿರುತ್ತದೆ. ಜಿಲ್ಲೆಯ ಜನರ ಆರೋಗ್ಯ ಕಾಪಾಡಬೇಕಿದ್ದ ಆರೋಗ್ಯ ಇಲಾಖೆಯ ಅಧಿಕಾರಿಗಳು ಮದ್ಯದೊಂದಿಗೆ ಮಾಂಸದೂಟ ಕೂಡ ಮಾಡಿದ್ದಾರೆನ್ನಲಾಗಿದೆ. ಈ ವಿಷಯ ಪತ್ರಿಕೆಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿ ವೈರಲ್ ಆಗಿತ್ತು.



ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕೋಣಿಯವರ ಕಾರು ಚಾಲಕ ಮಂಜುನಾಥ ಪಾಟೀಲ ಮತ್ತು ಸಿಬ್ಬಂದಿ ಮಹೇಶ ಹಿರೇಮಠ, ಅನಿಲ ತಿಪ್ಪನ್ನವರ, ರಮೇಶ ನಾಯಕ, ಯಲ್ಲಪ್ಪ ಮುನವಳ್ಳಿ, ದೀಪಕ ಗಾವಡೆ ಸೇರಿ ಏಳು ಜನರನ್ನು ಅಮಾನತ್ತು ಮಾಡಲಾಗಿದೆ.



ಸರಕಾರಿ ಕಚೇರಿಯಲ್ಲಿ  ಮದ್ಯಪಾನಗೋಷ್ಠಿ ನಡೆದಿರುವುದನ್ನು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕೋಣಿ ಅವರು ಒಪ್ಪಿಕೊಂಡಿದ್ದಾರೆ. ಆದರೆ ಅದು ಮಹಾತ್ಮಾ ಗಾಂಧಿ ಜಯಂತಿಯ ದಿನವಲ್ಲ, ಬದಲಾಗಿ ಏಳು ತಿಂಗಳ ಹಿಂದಿನದಾಗಿದೆ, ಆದರೂ ಈಗ ಬೆಳಕಿಗೆ ಬಂದಿದ್ದರಿಂದ ಪಾರ್ಟಿ ಮಾಡಿದವರನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದೆ ಎಂದು ಡಾ. ಕೋಣಿ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಗದದ ಕಡತಗಳಿಗೆ ವಿದಾಯ: ಪಾಲಿಕೆ ಪಿಐಡಿ ಸೇವೆ ಸಂಪೂರ್ಣ ಆನ್‌ಲೈನ್‌ಗೆಮಾಡೆಲ್ ಲಗೇಜ್‌ನಲ್ಲಿ 11.82 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆಕಿವೀಸ್ ಕ್ರಿಕೆಟ್‌ನ ಸುವರ್ಣ ಅಧ್ಯಾಯ ಅಂತ್ಯ; ವಿಲಿಯಮ್ಸನ್ ನಿವೃತ್ತಿನಿನ್ನೆ ಇಸ್ರೇಲ್‌ ದಾಳಿಗೆ ಬೆಂಬಲ, ಇಂದು ಪುತ್ರನಿಗಾಗಿ ಕಣ್ಣೀರು: ಹಳೆಯ ಪೋಸ್ಟಗಳು ವೈರಲ್!ಮಾವಿನ ಹಣ್ಣು ಸೇವಿಸಿ ಬೀದರ ಮೂಲದ ಇಬ್ಬರು ಸಹೋದರಿಯರ ಸಾವುಕರ್ನಾಟಕದ ನೀರಿನ ಹಕ್ಕಿಗೆ ದೆಹಲಿಯಲ್ಲಿ ಧ್ವನಿ : ಕೃಷ್ಣಾ ತೀರ್ಪಿನಿಂದ ಮಹದಾಯಿ ತನಕ ಬಾಕಿ ಬೇಡಿಕೆಗಳಿಗೆ ವೇಗ ನೀಡುವಂತೆ ಒತ್ತಾಯಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ: ವಿಜಯೇಂದ್ರ ಆರೋಪಇವಿಎಂಗಳ ಭಸ್ಮ : ಕೋಲ್ಕತ್ತಾ ಕಟ್ಟಡ ಅಗ್ನಿ ಅವಘಡದ ಹಿಂದೆ ಸಂಚು ಶಂಕೆಕಾನೂನಿನ ಭಯ ಮಾಯವೇ? ರಸ್ತೆಯಲ್ಲಿ ಉಗುಳಬೇಡಿ ಎಂದ ವೃದ್ಧನಿಗೆ ಅಶ್ಲೀಲ ಪದಗಳಿಂದ ನಿಂದಿಸಿ ಹಲ್ಲೆಭಾರತದಲ್ಲಿನ ಅಸಮಾನತೆ ಕುರಿತ ಅಧ್ಯಯನಕ್ಕೆ ಅರ್ಥಶಾಸ್ತ್ರಜ್ಞ ಜೀನ್ ಡ್ರೇಝ್‌ಗೆ ಪ್ರಶಸ್ತಿ