ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಂಗ್ರೆಸ್ ಅವಧಿಯಲ್ಲಿ 85% ಕಮಿಷನ್ : ಬೊಮ್ಮಾಯಿ 

ಬಳ್ಳಾರಿ : ಕಾಂಗ್ರೆಸ್ ನವರ ಅಧಿಕಾರದ ಅವಧಿಯಲ್ಲಿ 85 ಪರ್ಸೆಂಟ್ ಕಮಿಷನ್ ಇತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ಇಂದು ಆಯೋಜಿಸಲಾಗಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರ ತಂದೆ ರಾಜೀವ ಗಾಂಧಿ ಅವರೇ ಹೇಳಿದ್ದರು. ದೆಹಲಿಯಿಂದ 100 ರೂಪಾಯಿ ಕಳಿಸಿದರೆ ಹಳ್ಳಿಗಳಿಗೆ 15 ರೂಪಾಯಿ ತಲುಪುತ್ತಿತ್ತು ಎಂದು ಪ್ರಾಮಾಣಿಕವಾಗಿ ಒಪ್ಪಿಕೊಂಡಿದ್ದರು ಎಂದರು.

ರಾಜೀವ ಗಾಂಧಿ ಈ ಮಾತು ಹೇಳಿದ ವೇಳೆ ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು. ಆದರೆ ಇದೀಗ ನರೇಂದ್ರ ಮೋದಿಯವರ ಸರ್ಕಾರ ಬಂದ ನಂತರ ಎಲ್ಲಾ ಯೋಜನೆಗಳ ಫಲಾನುಭವಿಗಳಿಗೆ ಡಿಬಿಟಿ ವ್ಯವಸ್ಥೆ ಮೂಲಕ ಶೇಕಡ 100 ರಷ್ಟು ಮೊತ್ತ ತಲುಪುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭೂಮಿ, ಆಕಾಶ ಹಾಗೂ ಪಾತಾಳದಲ್ಲಿಯೂ ಭ್ರಷ್ಟಾಚಾರ ನಡೆಸಿದೆ. ಆಕಾಶದ ಭ್ರಷ್ಟಾಚಾರ ಎಂದರೆ 2ಜಿ ಹಗರಣ, ಕಾಮನ್ವೆಲ್ತ್ ಗೇಮ್ಸ ಭೂಮಿ ಮೇಲಿನ ಹಗರಣ ಹಾಗೂ ಪಾತಾಳದಲ್ಲಿ ಭ್ರಷ್ಟಾಚಾರವೆಂದರೆ ಕಲ್ಲಿದ್ದಲು ಹಗರಣ ಎಂದು ಹೇಳಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.