ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಬಾಲಕನ ಮೇಲೆ ಬೀದಿ ನಾಯಿಯ ದಾಳಿ

ಬೆಳಗಾವಿ : ಬೀದಿ ನಾಯಿಯ ದಾಳಿಯಿಂದ ಮನೆಯ ಕಂಪೌಂಡ್ ಒಳಗೆ ಆಟವಾಡುತ್ತಿದ್ದ 5 ವರುಷದ ಬಾಲಕ ಗಾಯಗೊಂಡು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶುಕ್ರವಾರ ಅನಗೋಳದ ಇಂದಿರಾ ನಗರದಲ್ಲಿ ಸಂಭವಿಸಿದೆ.

ಶಿವರಾಜ ಮೌರ್ಯ ಎಂಬ ಬಾಲಕ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ವೇಳೆ ಬೀದಿ ನಾಯಿ ಬಾಲಕನ ಮೇಲೆ ದಾಳಿ ಮಾಡಿದೆ. ಬಾಲಕನ ಅರಚಾಟ ಕೇಳಿ ನೆರವಿಗೆ ಧಾವಿಸಿದ ಜನರು ನಾಯಿಯನ್ನು ಓಡಿಸಿ ಬಾಲಕನನ್ನು ರಕ್ಷಿಸಿದ್ದಾರೆ. ತೀವ್ರ ಗಾಯಗೊಂಡಿರುವ ಬಾಲಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಪಾಲಿಕೆಯ ಮಾಜಿ ಸದಸ್ಯ ವಿನಾಯಕ ಗುಂಜಟ್ಕರ ಈ ಸಂದರ್ಭದಲ್ಲಿ ಮಾತನಾಡಿ, ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಹಲವಾರು ಬಾರಿ ಪಾಲಿಕೆಯ ಅಧಿಕಾರಿಗಳಿಗೆ ಬೀದಿ ನಾಯಿಗಳ ನಿಯಂತ್ರಣ ಮಾಡುವಂತೆ ಮನವಿ ಮಾಡಿಕೊಂಡರೂ ಇಲ್ಲಿಯವರೆಗೆ ಕ್ರಮ ಕೈಗೊಂಡಿಲ್ಲ. ಬಾಲಕನ ಕೂಗಾಟ ಕೇಳಿದ ಇಂದಿರಾ ನಗರದ ಜನರು ನಾಯಿಯಿಂದ ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಅನಗೋಳದ ಸರಕಾರಿ ಶಾಲೆಯ ಪಕ್ಕದಲ್ಲಿಯೇ ಬೀದಿ ನಾಯಿಗಳು ಹೆಚ್ಚಾಗಿವೆ ಎಂದರು.

ಪಾಲಿಕೆಯ ಅಧಿಕಾರಿಗಳು ಬೀದಿ ನಾಯಿಗಳ ಹಾವಳಿಯನ್ನು ತಪ್ಪಿಸಲು ಕ್ರಮ ಕೈಗೊಳ್ಳದಿದ್ದರೆ ಹೋರಾಟ ನಡೆಸಲಾಗುವುದು ಎಂದೂ ಅವರು ಎಚ್ಚರಿಸಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.