LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸೆರೆ ಸಿಕ್ಕ ನರಭಕ್ಷಕ ಹುಲಿ

ಮೈಸೂರು, ೨೮: ಬಂಡೀಪುರ ಭಾಗದಲ್ಲಿ ಮಹಿಳೆ ಸಾವಿಗೆ ಕಾರಣವಾಗಿದ್ದ ಭಾರೀ ಗಾತ್ರದ ನರಭಕ್ಷಕ ಹುಲಿಯನ್ನು ಸೋಮವಾರ ಮಧ್ಯರಾತ್ರಿ ವೇಳೆ ನಡೆಸಿದ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಸೆರೆ ಹಿಡಿದಿದೆ.

10 ವರ್ಷದ ಗಂಡು ಹುಲಿ ಇದಾಗಿದ್ದು, ಎರಡು ದಿನದ ಹಿಂದೆ ಹಸುವೊಂದನ್ನು ಕೊಂದು ಹಾಕಿದ್ದ ನಂಜನಗೂಡು ತಾಲ್ಲೂಕು ಬಳ್ಳೂರು ಹುಂಡಿಯಲ್ಲಿಯ ಜಾಗದಲ್ಲಿಯೇ ಅದನ್ನು ಸೆರೆ ಹಿಡಿಯಲಾಗಿದೆ.



ಬಳ್ಳೂರು ಹುಂಡಿ ಬಳಿ ದನ ಮೇಯಿಸಲು ಹೋಗದ್ದ ರತ್ನಮ್ಮ ಎಂಬ ಮಹಿಳೆ ಮೇಲೆ ದಾಳಿ ಮಾಡಿದ್ದ ಹುಲಿ ಆಕೆಯನ್ನು ಕೊಂದು ಹಾಕಿತ್ತು. ಮರುದಿನ ಅದೇ ಗ್ರಾಮದ ಹಸುವೊಂದರ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಸೋಮವಾರ ಮಧ್ಯರಾತ್ರಿ 1: 45ರ ಹೊತ್ತಿಗೆ ಹುಲಿ ಅಲ್ಲಿಗೆ ಬಂದಾಗ ಅರವಳಿಕೆ ನೀಡಿ ಅದನ್ನು ಸೆರೆ ಹಿಡಿಯಲಾಯಿತು. ಆನಂತರ ಅದನ್ನು ಮೈಸೂರು ಮೃಗಾಲಯಕ್ಕೆ ತರಲಾಗಿದೆ.



ಹುಲಿ ಒಮ್ಮೆ ಬೇಟೆ ಮಾಡಿದ ಸ್ಥಳಕ್ಕೆ ಬಂದೇ ಬರುತ್ತದೆ ಎಂಬ ನಂಬಿಕೆ ಮೇಲೆ ಅದು ದಾಳಿ ಮಾಡಿದ ಸ್ಥಳದಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಸೋಮವಾರ ರಾತ್ರಿ 9 ರ ಸುಮಾರಿಗೆ ಹಸು ತಿನ್ನಲು ಬಂದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅರಣ್ಯ ಇಲಾಖೆ ಸಮೀಪದಲ್ಲೇ ಬೋನು ಇರಿಸಿ ಅದರೊಳಗೆ ವೈದ್ಯಾಧಿಕಾರಿ ಡಾ.ವಾಸೀಮ ಜಾಫರ ಇದ್ದರು. ಸಿಬ್ಬಂದಿಯೂ ಹುಲಿಗಾಗಿ ಕಾಯುತ್ತಿದ್ದರು. ಮಧ್ಯರಾತ್ರಿ ಹುಲಿ ಬಂದಾಗ ಅದಕ್ಕೆ ಅರವಳಿಕೆ ನೀಡಲು ಹೊಂಚು ಹಾಕಿ ಕುಳಿತಿದ್ದ ವೈದ್ಯರು ಯಶಸ್ವಿಯಾದರು. ಕೆಲವೇ ಕ್ಷಣದಲ್ಲಿ ಮಂಪರಿನಿಂದ ಮಲಗಿದ ಹುಲಿಯನ್ನು ಬಲೆ ಹಾಕಿ ಸೆರೆ ಹಿಡಿದು ಬೆಳಗಿನ ಜಾವವೇ ಮೈಸೂರು ಮೃಗಾಲಯಕ್ಕೆ ತರಲಾಯಿತು.



ಹುಲಿ ಸೆರೆಗೆ 200 ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ, 100 ಮಂದಿ ಗಿರಿಜನರನ್ನು ನಿಯೋಜನೆ ಮಾಡಲಾಗಿತ್ತು. ಡ್ರೋಣ ಬಳಸಿ ಹುಲಿ ಜಾಡು ಪತ್ತೆಗೆ ಕ್ರಮ ಕೈಗೊಳ್ಳಲಾಗಿತ್ತು. ಮೂರು ಸಾಕಾನೆಗಳೂ ಸೆರೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ