LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ವಸತಿ ಶಾಲಾ ಮಕ್ಕಳನ್ನು ಸಾಲಾಗಿ ನಿಲ್ಲಿಸಿ ಬೆಲ್ಟ, ದೊಣ್ಣೆಯಿಂದ ಥಳಿಸಿದ ರಾಕ್ಷಸ

ತುಮಕೂರು: ವಸತಿ ಶಾಲೆಯೊಂದರ ಮಕ್ಕಳ ಮೇಲೆ ವ್ಯಕ್ತಿಯೋರ್ವ ಮನಬಂದಂತೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.



ತುಮಕೂರು ತಾಲೂಕಿನ ಮಲ್ಲಸಂದ್ರದ ವಿಶ್ವಭಾರತಿ ಸರ್ಕಾರಿ ಅನುದಾನಿತ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಕಾರ್ಯದರ್ಶಿ ಎನ್.ಮೂರ್ತಿ ಅವರ ಪುತ್ರ ಭರತ ಈ ಕೃತ್ಯವೆಸಗಿದ್ದು, ಕುಡಿದ ಅಮಲಿನಲ್ಲಿ ವಸತಿ ಶಾಲೆಯ 40 ಮಕ್ಕಳನ್ನು ಸಾಲಾಗಿ ನಿಲ್ಲಿಸಿ ಬೆಲ್ಟ ಹಾಗೂ ದೊಣ್ಣೆಯಿಂದ ಮನಬಂದಂತೆ ಹೊಡೆದಿದ್ದಾನೆ.



ಹಲ್ಲೆ ಘಟನೆಯನ್ನು ಶಾಲಾ ಆಡಳಿತ ಮಂಡಳಿ ಮುಚ್ಚಿಟ್ಟಿತ್ತು. ಘಟನೆ ನಡೆದ ಮೂರು ದಿನಗಳ ಬಳಿಕ ಹಲ್ಲೆಗೊಳಗಾದ ಮಕ್ಕಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗೆ ಧಾವಿಸಿದ್ದಾರೆ. ಈಗ ಆರೋಪಿ ಭರತ ಪರಾರಿಯಾಗಿದ್ದಾನೆ.



ಪ್ರಕರಣ ದಾಖಲಿಸಿಕೊಂಡಿರುವ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ಭರತಗಾಗಿ ಹುಡುಕಾಟ ನಡೆಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ