LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಜಾತ್ರೆಯಲ್ಲಿ ಜಗಳ; ಬಿಜೆಪಿ ಕಾರ್ಯಕರ್ತನ ಕೊಲೆ

ಧಾರವಾಡ : ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ ಕೋಟೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರ ಹತ್ಯೆಯಾಗಿದೆ. ಅವರಿಗೆ 36 ವರುಷ ವಯಸ್ಸಾಗಿತ್ತು.



ಬಿಜೆಪಿಯ ಕಾರ್ಯಕರ್ತರಾಗಿದ್ದ ಪ್ರವೀಣ ಕಮ್ಮಾರ ಮಂಗಳವಾರ ಅಮೃತ ದೇಸಾಯಿ ಅವರ ನಾಮಪತ್ರ ಸಲ್ಲಿಕೆಯ ರ್ಯಾಲಿಯಲ್ಲೂ ಭಾಗಿಯಾಗಿದ್ದರು. ಅದೇ ದಿನ ರಾತ್ರಿ ಕೋಟೂರಿನಲ್ಲಿ ನಡೆದ ಗ್ರಾಮದ ಉಡಚಮ್ಮದೇವಿ ಜಾತ್ರೆ ಸಂದರ್ಭದಲ್ಲಿ ಪ್ರಸಾದ ವಿತರಣೆ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಜಗಳ ನಡೆದಿದೆ. ಪ್ರವೀಣ ಅವರು ಮಧ್ಯ ಪ್ರವೇಶಿಸಿ ಜಗಳ ಬಿಡಿಸಿದ್ದ ಎನ್ನಲಾಗಿದೆ.



ಆದರೆ, ಮದ್ಯದ ಅಮಲಿನಲ್ಲಿ ಜಗಳ ಮಾಡಿದ್ದ ಗುಂಪು ನಂತರ ಪ್ರವೀಣ ಕಮ್ಮಾರ ಅವರಿಗೆ ಚಾಕುವಿನಿಂದ ಇರಿದು ತೀವ್ರ ಗಾಯಗೊಳಿಸಿ ಪರಾರಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಪ್ರವೀಣ ಅವರನ್ನು ಚಿಕಿತ್ಸೆಗಾಗಿ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಬುಧವಾರ ನಸುಕಿನ ಜಾವ ಅವರು ಸಾವನ್ನಪ್ಪಿದರು.



ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಶಾಸಕ ಅಮೃತ ದೇಸಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. ನಾಲ್ವರು ಈ ಕೃತ್ಯ ಮಾಡಿದ್ದಾರೆ ಎನ್ನಲಾಗಿದ್ದು ಪೊಲೀಸರು ಇವರನ್ನು ಹುಡುಕುತ್ತಿದ್ದಾರೆ. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಕೋಟೂರಿನಲ್ಲಿ ನೀರವ ಮೌನ ಆವರಿಸಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಕೂಡ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಚುನಾವಣೆ ಸಂದರ್ಭದಲ್ಲಿಯೇ ಈ ಹತ್ಯೆ ನಡೆದಿದ್ದು, ಯಾವುದೇ ಗಲಾಟೆಗಳು ಉಂಟಾಗದಂತೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ ಒದಗಿಸಲಾಗಿದೆ. ಹತ್ಯೆ ಆರೋಪಿಗಳ ಪತ್ತೆಗಾಗಿ ಜಾಲ ಬೀಸಲಾಗಿದ್ದು, ತಂಡವನ್ನು ಕೂಡ ರಚನೆ ಮಾಡಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ