LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಐಎಎಸ್, ಐಪಿಎಸ್ ಆಗಬೇಕೆನ್ನುವ ಪದವೀಧರರಿಗೆ ಸುವರ್ಣವಕಾಶ

ಧಾರವಾಡ: ಉನ್ನತ ಹುದ್ದೆಗಳಾದ ಐಎಎಸ್, ಐಪಿಎಸ್ ಸೇರಿದಂತೆ ಯುಪಿಎಸ್‍ಸಿ ಯ ವಿವಿಧ ಹುದ್ದೆಗಳಿಗೆ ಉಚಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ನೂತನವಾಗಿ ಆರಂಭವಾದ ಧೀ ಅಕಾಡೆಮಿಗೆ ವಿದ್ಯಾರ್ಥಿಗಳು ಅವಕಾಶ ಪಡೆಯಬಹುದು.



ಬೆಂಗಳೂರಿನಲ್ಲಿಯೇ ಉತ್ಕೃಷ್ಟ ಗುಣಮಟ್ಟದ ತರಬೇತಿಯನ್ನು ಪಡೆಯಲು ಅನುಕೂಲಕರ ವಾತಾವರಣ ನಿರ್ಮಾಣ ಮಾಡುವುದೇ ಧೀ ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ.



ಯುಪಿಎಸ್‍ಸಿ ಆಕಾಂಕ್ಷಿಗಳಿಗೆ ತರಬೇತಿ ನೀಡಲೆಂದೇ ದೆಹಲಿಯಿಂದ ನುರಿತ, ಅನುಭವಿ ಸಂಪನ್ಮೂಲ ವ್ಯಕ್ತಿಗಳ ತಂಡವನ್ನು ಬೆಂಗಳೂರಿಗೆ ಕರೆತಂದು ಸ್ಪರ್ಧಾರ್ಥಿಗಳಿಗೆ ಬೋಧನೆ ಮಾಡಿಸಲಾಗುವುದು. ಮಾತ್ರವಲ್ಲದೆ, ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳ ತಂಡವೂ ಅತಿಥಿ ಉಪನ್ಯಾಸಕರಾಗಿ ಬಂದು ಅಭ್ಯರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಲಿದ್ದಾರೆ.



ಧೀ ಅಕಾಡೆಮಿಗೆ ಈಗಾಗಲೇ ನೋಂದಾವಣಿ ಪ್ರಕ್ರಿಯೆಗಳು ಆರಂಭವಾಗಿದ್ದು, ಪ್ರತಿ ವಿಷಯಗಳಿಗೂ ಪ್ರತ್ಯೇಕ ಪರಿಣಿತರ ತಂಡದಿಂದ ಕೋಚಿಂಗ್ ದೊರೆಯಲಿದೆ. ಸರಳ, ಸ್ಪಷ್ಟ ಭಾಷೆಯಲ್ಲಿ ಅಭ್ಯರ್ಥಿಗಳಿಗೆ ಬೋಧಿಸಲಾಗುವುದು ಹಾಗೂ ಇಂಗ್ಲಿಷ್, ಭಾಷಾ ಕೌಶಲ್ಯ ಹೆಚ್ಚಿಸಲಾಗುವುದು. ವ್ಯಕ್ತಿತ್ವ ವಿಕಸನ ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆ, ಒತ್ತಡ ನಿರ್ವಹಣೆ ಮಾಡುವ ತರಗತಿಗಳನ್ನು ಇಲ್ಲಿ ವಿಶೇಷವಾಗಿ ನೀಡಲಾಗುತ್ತದೆ. ಮಾತ್ರವಲ್ಲದೆ, ಯೋಗ, ಧ್ಯಾನ ತರಬೇತಿಗಳನ್ನು ನೀಡುವ ಮೂಲಕ ಅಭ್ಯರ್ಥಿಗಳ ಮಾನಸಿಕ ಮಟ್ಟವನ್ನು ಸದೃಢಗೊಳಿಸಲಾಗುವುದು ಎಂದು ಹೇಳಲಾಗಿದೆ.



ಪದವಿ ಪೂರ್ಣಗೊಳಿಸಿರುವ, ಅಂತಿಮ ಪದವಿಯಲ್ಲಿ ಅಭ್ಯಾಸ ನಡೆಸುತ್ತಿರುವವರು ಹಾಗೂ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ www.dhiacademy.in ಅಥವಾ ಮೊ.ಸಂ. 9844868662 ಹಾಗೂ 9844868663 ಅನ್ನು ಸಂಪರ್ಕಿಸಬಹುದಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ