ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೈಕ್ ಗೆ ಲಾರಿ ಡಿಕ್ಕಿ : ಬೈಕ್ ಸವಾರನ ಸಾವು

ಧಾರವಾಡ : ಸರ್ಕಲ್ ನಲ್ಲಿ ರೋಡ್ ಕ್ರಾಸ್ ಮಾಡುವಾಗ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಳಗಲಿ ಕ್ರಾಸ್ ಬಳಿ ಸಂಭವಿಸಿದೆ.

29 ವರ್ಷದ ಮಹಮ್ಮದ ನವಾಜ ಮೃತ ದುರ್ದೈವಿ. ಲಾರಿ ಡಿಕ್ಕಿಗೆ ಬೈಕ್ ಬಹುದೂರಕ್ಕೆ ಹೋಗಿ ಬಿದ್ದಿದ್ದು, ನವಾಜ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು. ಮೃತ ಮಹಮ್ಮದ ನವಾಜ ಹುಬ್ಬಳ್ಳಿಯ ತಬೀಬ್ಲ್ಯಾಂಡ್ ನಿವಾಸಿಯಾಗಿದ್ದು, ಕೆಲಸದ ನಿಮಿತ್ತ ಧಾರವಾಡ ಬಂದಿದ್ದರು.

ಲಾರಿ ಡಿಕ್ಕಿ ಹೊಡೆದು ಬೈಕ್ ಪಲ್ಟಿಯಾಗಿ ನವಾಜ ಪ್ರಾಣ ಕಳೆದುಕೊಳ್ಳುತ್ತಿದ್ದಂತೆಯೇ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಡಿಕ್ಕಿಯಾಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.