ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರೈಲಿಗೆ ತಲೆಕೊಟ್ಟು ವ್ಯಕ್ತಿಯ ಆತ್ಮಹತ್ಯೆ 

ವಿಜಯಪುರ: ಜೀವನದಲ್ಲಿ ಜುಗುಪ್ಸೆಗೊಂಡ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಗಣೇಶನಗರದ ಬಳಿ ನಡೆದಿದೆ.‌

ಗಡಗಿ ಲೇಔಟ್ ನಿವಾಸಿ ಗುರುರಾಜ ಪುರೋಹಿತ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮುಂಬೈ-ಗದಗ ಮಾರ್ಗ ಮಧ್ಯ ಸಂಚರಿಸುವ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾರೆ.

ರೈಲ್ವೆ ಹಳಿಯ ಮೇಲೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಜನರು ಛಿದ್ರಗೊಂಡ ಮೃತದೇಹ ಕಂಡು ಬೆಚ್ಚಿ ಬಿದ್ದಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಜಯಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.