LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಬಿಜೆಪಿ ಮುಖಂಡನ ಹೆಸರು ಬರೆದಿಟ್ಟು ವ್ಯಕ್ತಿಯ ಆತ್ಮಹತ್ಯೆ 

ಬೆಳಗಾವಿ : ಬಿಜೆಪಿ ನಾಯಕರೊಬ್ಬರು  ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಮಚ್ಛೆಯ ನೆಹರೂ ನಗರದಲ್ಲಿ ಬೆಳಕಿಗೆ ಬಂದಿದೆ.



28 ವರ್ಷದ ಸಾವಿಯೋ ಪಿಳೈ ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಅವರು ಪತ್ರ ಬರೆದಿಟ್ಟಿದ್ದು, ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಹಾಗು ಇನ್ನಿಬ್ಬರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.



ಗಂಡ ತೀರಿಕೊಂಡಿರುವ ಎರಡು ಮಕ್ಕಳ ತಾಯಿಯಾದ ರೇಣುಕಾ ಎಂಬ ಮಹಿಳೆಯೋರ್ವಳ ಜೊತೆ ಹಿಂಡಲಗಾದ ಗಣೇಶ ನಗರದಲ್ಲಿ ವಾಸಿಸುವ ಸಾವಿಯೋ ಪಿಳೈ ಅವರು ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಕ್ಯಾಂಪ್ ಠಾಣಾ ವ್ಯಾಪ್ತಿಯಲ್ಲಿ ವಾಸಿಸುವ ಆಕೆ ತನ್ನನ್ನು ಮದುವೆಯಾಗಬೇಕೆಂದು ತೀವ್ರ ಒತ್ತಡ ತಂದಿದ್ದು ಆದರೆ ಎರಡು ಮಕ್ಕಳ ತಾಯಿಯೊಂದಿಗೆ ಮದುವೆ ಮಾಡಿಸಲು ಸಾವಿಯೋ ಕುಟುಂಬ ನಿರಾಕರಿಸಿದೆ. ಈ ಬಗ್ಗೆ  ಇಬ್ಬರ ಮಧ್ಯೆ ಮನಸ್ತಾಪವಾಗಿ ಪ್ರಕರಣ ಠಾಣೆ ಮೆಟ್ಟಿಲೇರಿತ್ತು. ಈ ವೇಳೆ ಬಿಜೆಪಿ ಮುಖಂಡ ಪೃಥ್ವಿ ಸಿಂಗ್  1 ಲಕ್ಷ 50 ಸಾವಿರ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ. ಪೃಥ್ವಿ ಸಿಂಗ್ ಅವರು ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ.



ಪೃಥ್ವಿ ಸಿಂಗ್ ಮತ್ತಿಬ್ಬರು ಒಂದೂವರೆ ಲಕ್ಷ ಪಡೆದಿದ್ದಲ್ಲದೇ ಇನ್ನೂ ಹೆಚ್ಚಿನ ಹಣ ನೀಡುವಂತೆ ಕಿರುಕುಳ ನೀಡಿದ್ದಾರೆ ಎಂದು ಡೆತ್ ‌ನೋಟ್ ಬರೆದಿಟ್ಟು ಸಾವಿಯೋ ಪಿಳೈ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ