LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ವ್ಯಕ್ತಿಗೆ ಚಾಕು ಇರಿತ

ಚಿಕ್ಕೋಡಿ : ಇತ್ತೀಚಿಗೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರುವ ಕಾಗವಾಡ ಮತ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಪ್ರಶಾಂತ ಅಪರಾಜ್ ಅವರನ್ನು ಅಪರಿಚಿತರ ಗುಂಪೊಂದು ಚಾಕುವಿನಿಂದ ಇರಿದು ಪರಾರಿಯಾಗಿದೆ. ಅಪರಾಜ ಅವರನ್ನು ಕಾಗವಾಡ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.



ಸೋಮವಾರ ಸಂಜೆ ಅಪರಾಜ್ ಒಬ್ಬರೇ ಕಾಗವಾಡ ಶೇಡಬಾಳ ಮಧ್ಯೆ ಇದ್ದಾಗ ಬೈಕ್ ಗಳಲ್ಲಿ ಬಂದ ಗುಂಪು ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದೆ. ರಾಜಕೀಯ ಕಾರಣಕ್ಕಾಗಿಯೂ ಅಥವಾ ಯಾವ ಉದ್ದೇಶಕಾಗಿ ಹಲ್ಲೆ ಮಾಡಲಾಗಿದೆ ಎಂದು ಪೊಲೀಸ್ ವಿಚಾರಣೆಯಿಂದ ತಿಳಿದು ಬರಲಿದೆ.



ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ ಅವರ ಆಪ್ತರಾಗಿದ್ದ ಅಪರಾಜ್ ಅವರು ಇತ್ತೀಚಿಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಕಾಗವಾಡ ಯುವ ಘಟಕದ ಅಧ್ಯಕ್ಷರೆಂದು ಆಯ್ಕೆಯಾಗಿದ್ದು ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತೀವ್ರವಾಗಿ ತೊಡಗಿಸಿಕೊಂಡಿದ್ದರು. ಚುನಾವಣೆ ಹತ್ತಿರ ಬಂದಿರುವದರಿಂದ ರಾಜಕೀಯ ಕಾರಣದಿಂದ ಅವರ ಮೇಲೆ ಹಲ್ಲೆಯಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.



ಅಪರಾಜ್ ಅವರ ಮೇಲಿನ ಹಲ್ಲೆ ಖಂಡಿಸಿ ಐಣಾಪುರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಏರ್ಪಡಿಸಲಾಗಿದೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ