LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

5 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿ ಪೊಲೀಸ ಗುಂಡಿಗೆ ಬಲಿ

ಹುಬ್ಬಳ್ಳಿ: ನಗರದಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಇಂದು ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಎನ್‌ಕೌಂಟರ‌ನಲ್ಲಿ ಸಾವಿಗೀಡಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.



ಐದು ವರ್ಷದ ಬಾಲಕಿಯ ಕೊಲೆ ಪ್ರಕರಣದ ಆರೋಪಿ ಪತ್ತೆಗಾಗಿ ಬಂಧಿಸಲು ಹುಬ್ಬಳ್ಳಿ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದರು. ಆರೋಪಿ ಬಿಹಾರ ಮೂಲದ ರಿತೇಶಕುಮಾರ ಎನ್ನಲಾಗಿದ್ದು, ಈತ ಇರುವ ಜಾಗ ಪತ್ತೆಯಾದ ನಂತರ ಆತನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಆದರೆ, ಆರೋಪಿ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದರಿಂದ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದರು. ಈ ವೇಳೆ ಗುಂಡು ಆರೋಪಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.



ಕಾಲು ಮತ್ತು ಎದೆಯ ಭಾಗಕ್ಕೆ ಗುಂಡು‌ ತಗುಲಿದ್ದರಿಂದ ಆರೋಪಿ ಕುಸಿದುಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಒಯ್ಯಲಾಯಿತು. ಆದರೆ, ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.



ಹುಬ್ಬಳ್ಳಿಯ ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಮೃತ ಆರೋಪಿ ಚಾಕಲೇಟ್ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಆರೋಪಿ ರಿತೇಶಕುಮಾರ ಬಾಲಕಿಯನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.



ಬಾಲಕಿಯ ತಂದೆ ಕೆಲಸಕ್ಕೆ ಹೋಗಿದ್ದರು. ಬಾಲಕಿ ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದಳು. ಈ ವೇಳೆ ಮಗು ಮನೆಯ ಹೊರೆಗೆ ಮಗು ಆಟವಾಡುತ್ತಿತ್ತು. ಇದನ್ನು ಗಮನಿಸಿದ ಆರೋಪಿ ಚಾಕಲೇಟ ಆಸೆ ತೋರಿಸಿ ಬಾಲಕಿಯನ್ನು ಅಪಹರಿಸಿದ್ದ.



ಮಗಳು ಕಾಣೆಯಾಗಿದ್ದಾಳೆಂದು ತಾಯಿಗೆ ತಿಳಿದಾಗ, ಆಕೆ ಸ್ಥಳೀಯರೊಂದಿಗೆ ಸೇರಿ ಆಕೆಗಾಗಿ ಹುಡುಕಾಟ ಆರಂಭಿಸಿದಾಗ ನಿರ್ಮಾಣ ಹಂತದ ಕಟ್ಟಡದ ಬಳಕೆಯಾಗದ ಶೌಚಾಲಯದಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು.



ಬಾಲಕಿಯ ಪೋಷಕರು ಕೊಪ್ಪಳದವರಾಗಿದ್ದು, ಪೇಂಟಿಂಗ್ ಕೆಲಸಕ್ಕಾಗಿ ಹುಬ್ಬಳ್ಳಿಗೆ ಬಂದಿದ್ದರು.



ಘಟನೆ ಖಂಡಿಸಿ ಅಶೋಕ ನಗರ ಪೊಲೀಸ್ ಠಾಣೆಯ ಮುಂದೆ ಸ್ಥಳೀಯರಿಂದ ಬೃಹತ್ ಪ್ರತಿಭಟನೆ ನಡೆದಿತ್ತು. ಇದರ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಆತನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ, ಈ ವೇಳೆ ಮೂವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ನಂತರ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದಾಗ ಗಂಭೀರವಾಗಿ ಗಾಯಗೊಂಡ ಆರೋಪಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತೀಶ ಜಾರಕಿಹೊಳಿ, ಆಪ್ತರ ಮನೆಗಳಲ್ಲಿ ಇಡಿ ಶೋಧ ಅಂತ್ಯಸತೀಶ ಜಾರಕಿಹೊಳಿ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಲಕ್ಷ್ಮಿ ಹೆಬ್ಬಾಳಕರಡಿ.ಕೆ. ಶಿವಕುಮಾರ ತಾಯಿಗೆ ನೋಟಿಸ್ ನೀಡಿಲ್ಲಮತ್ತೆ ಗಾಯಗೊಂಡ ಹರ್ಷಿತ ರಾಣಾ: ಅಫ್ಘಾನಿಸ್ತಾನ ಸರಣಿ, ಏಷ್ಯನ್ ಗೇಮ್ಸ್‌ನಿಂದ ಹೊರಕ್ಕೆಎಸ್‌ಐಆರ್‌ ಅಚ್ಚರಿ: ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!14 ವರ್ಷದ ನಿಶುಗೆ ಅತ್ಯಾಚಾರ ಬೆದರಿಕೆ: ತಕ್ಷಣ ರಕ್ಷಣೆಗೆ ಸುಪ್ರೀಂ ಕೋರ್ಟ ಸೂಚನೆ‘ನನ್ನನ್ನು ಪ್ರಚಾರದ ಸಾಧನವಾಗಿ ಬಳಸಲಾಗಿದೆ’: ಭಾರತ ಸರ್ಕಾರದ ವಿರುದ್ಧ ವಿಜಯ ಮಲ್ಯ ಆರೋಪಉಳಿದ ಭರವಸೆಗಳ ಈಡೇರಿಕೆಗೆ ವೇಗ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆಎಸ್‌ಐಆರ್ : ಡಿ.ಕೆ. ಶಿವಕುಮಾರ ತಾಯಿ ಸೇರಿ ಹಲವು ಗಣ್ಯರಿಗೆ ನೋಟಿಸ್ಗರ್ಬಾದಲ್ಲಿ ಮುಸ್ಲಿಮರಿಗೆ ನಿಷೇಧ ಸರಿಯಲ್ಲ; ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ನೀಡಿದೆ: ಅಠಾವಳೆ