LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

2 ತಿಂಗಳ ಮಗುವನ್ನು ಕಣಬರಗಿ ಕೆರೆಗೆಸೆದು ಓಡಿದ ತಾಯಿ!

ಬೆಳಗಾವಿ : ಹೆತ್ತ ತಾಯಿಯೇ ಎರಡು ತಿಂಗಳ ಮಗುವನ್ನು ಕೆರೆಗೆ ಎಸೆದ ಘಟನೆ ಬೆಳಗಾವಿ‌‌ ತಾಲೂಕಿನ ಕಣಬರಗಿ ಗ್ರಾಮದಲ್ಲಿ ನಡೆದಿದೆ.



ಮಹಿಳೆಯೊಬ್ಬಳು ಮಗು ಕೆರೆಗೆ ಎಸೆಯುವುದನ್ನು ನೋಡಿದ ದನ, ಕರು ತೊಳೆಯುತ್ತಿದ್ದ ಯುವಕರು ತಕ್ಷಣವೇ ಕೆರೆಗೆ ಹಾರಿ ಮಗು ರಕ್ಷಣೆ ಮಾಡಿದ್ದಾರೆ.



ಕಣಬರಗಿ ಗ್ರಾಮದ ನಿವಾಸಿ ಶಾಂತಾ ರಾಬರ್ಟ‌ ಕರವಿನಕೊಪ್ಪ ಎಂಬುವವಳು ಈ ಕೃತ್ಯ‌ವೆಸಗಿದ್ದಾಳೆ ಎಂದು ಹೇಳಲಾಗಿದೆ. ಮಗುವನ್ನು ಬೆಳಗಾವಿ ನಗರದ ಚಿಕ್ಕ ಮಕ್ಕಳ ಖಾಸಗಿ ಆಸ್ಪತ್ರೆಗೆ ಮಗು ದಾಖಲಿಸಲಾಗಿದೆ.



ಮೂರು ವರ್ಷದ ಹಿಂದೆ ಮದುವೆಯಾಗಿದ್ದ ಶಾಂತಾ ಗೃಹಿಣಿಯಾಗಿದ್ದು ಗಂಡ  ಕೆಲಸಕ್ಕೆ ಹೋಗಿದ್ದಾಗ ಮಗುವನ್ನು ಎತ್ತಿಕೊಂಡು ಕೆರೆಗೆ ಬಂದಿದ್ದಳು. ಕೆಲ ಹೊತ್ತು ಅಲ್ಲಿಯೇ ಓಡಾಡಿದ ಬಳಿಕ ಮಗುವನ್ನು ಕೆರೆಗೆ ಎಸೆದು ಅಲ್ಲಿಂದ ಓಡಿದ್ದಾಳೆ. ಅದೃಷ್ಟವಶಾತ್ ಇದನ್ನು ಗಮನಿಸಿದ ಅಲ್ಲಿದ್ದವರೊಬ್ಬರು ಜನರನ್ನು ಕೂಗಿ ಕರೆದಿದ್ದಾರೆ. ಆಗ ಪುಣ್ಯಾತ್ಮನೊಬ್ಬ  ಕೂಡಲೇ ಕೆರೆಗೆ ಹಾರಿ ಮಗುವನ್ನು ರಕ್ಷಣೆ ಮಾಡಿದರು. ನಂತರ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.



ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಬಳಿಕ ಆಸ್ಪತ್ರೆಗೆ ಹೋಗಿ ಮಗುವಿನ ಆರೋಗ್ಯದ ಕುರಿತು ವಿಚಾರಿಸಿ ತಾಯಿಯನ್ನು ಬಂಧಿಸಿದ್ದಾರೆ. ಮಗುವಿಗೆ ನಿರಂತರವಾಗಿ ಫಿಟ್ಸ ಬರುತ್ತಿದೆ ಹಾಗೂ ಅಪಸ್ಮಾರವೂ ಇದೆ.  ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗದ ಕಾರಣ ಈ ಕೃತ್ಯ ಎಸಗಿರುವುದಾಗಿ  ಪ್ರಾಥಮಿಕ ತನಿಖೆ ವೇಳೆ ಆಕೆ ತಿಳಿಸಿದ್ದಾಳೆ ಎನ್ನಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ