ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಯಿಸಿ ಪೊಲೀಸ ಪೇದೆಯ ಕೊಲೆ

ಕಲಬುರಗಿ : ಅಕ್ರಮ ಮರಳುಗಾರಿಕೆಗೆ ಛತ್ತೀಸಗಡ ಮೂಲದ ಮೂವರು ಕಾರ್ಮಿಕರು ರಾಯಚೂರಿನಲ್ಲಿ ಬಲಿಯಾದ ಘಟನೆ ಇನ್ನೂ ಹಸಿರಿರುವಾಗಲೇ ಅಂತಹದೇ ಘಟನೆ ನೆರೆಯ ಕಲಬುರಗಿ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ತಡೆಯಲು ಯತ್ನಿಸಿದ ಪೊಲೀಸ್ ಕಾನ್ಸಟೇಬಲ್ ಮೇಲೆಯೇ ಟ್ರ್ಯಾಕ್ಟರ್ ಹಾಯಿಸಿ ಕೊಲೆ ಮಾಡಲಾಗಿದೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪೂರ ಬಳಿ ಅಕ್ರಮ ಮರಳು ಸಾಗಾಣಿಕೆಗೆ ನೆಲೋಗಿ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಮಯೂರ (50) ಬಲಿಯಾಗಿದ್ದಾರೆ.

ಅಕ್ರಮ ಮರಳು ಸಾಗಣಿಕೆ ತಡೆಯಲು ಮಯೂರ ಅವರನ್ನು ನಿಯೋಜಿಸಲಾಗಿತ್ತು. ಕೃಷ್ಣಾ ನದಿಯಿಂದ ಮರಳನ್ನು ಯಾವುದೇ ಅನುಮತಿಯಿಲ್ಲದೇ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ತಡೆಯಲು ಯತ್ನಿಸಿದ್ದಾರೆ. ಆದರೆ ಚಾಲಕ ಅವರಿಗೆ ಡಿಕ್ಕಿ ಹೊಡೆಸಿ ವಾಹನದ ಸಮೇತ ಪರಾರಿಯಾಗಿದ್ದಾನೆ.
ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.