LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ದೀಪಾವಳಿ ಅಮವಾಸ್ಯೆಯ ದಿನ ಸಂಭವಿಸಲಿದೆ ಸೂರ್ಯಗ್ರಹಣ

ಹೊಸದಿಲ್ಲಿ, ೧೫- ವರ್ಷದ ಎರಡನೇ ಸೂರ್ಯಗ್ರಹಣ ಅಕ್ಟೋಬರ 25 ರಂದು ಸಂಭವಿಸಲಿದೆ. ದೀಪಾವಳಿ ಅಮವಾಸ್ಯೆಯ ದಿನ ಸೂರ್ಯಗ್ರಹಣವಾಗಲಿದ್ದು, ಭಾಗಶಃ ಸೂರ್ಯ ಗ್ರಹಣವಾಗಿರುತ್ತದೆ ಎಂದು ತಜ್ಞರು ಹೇಳಿದ್ದಾರೆ.



ಮಂಗಳವಾರ ತುಲಾ ರಾಶಿಯಲ್ಲಿ ಈ ಗ್ರಹಣ ಸಂಭವಿಸಲಿದೆ. ಈ ಸೂರ್ಯ ಗ್ರಹಣದ ಅವಧಿಯು ಸುಮಾರು 4 ಗಂಟೆ 3 ನಿಮಿಷಗಳವರೆಗೆ ಇರಲಿದೆ. ಈ ವರ್ಷದ ಸೂರ್ಯಗ್ರಹಣವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಯಾಕೆಂದ್ರೆ ಗ್ರಹಣದ ಸೂತಕ ದೀಪಾವಳಿಯ ರಾತ್ರಿಯಿಂದಲೇ ಪ್ರಾರಂಭವಾಗುತ್ತದೆ.



ಸೂರ್ಯಗ್ರಹಣ ಅಕ್ಟೋಬರ 25 ರಂದು ಮಧ್ಯಾಹ್ನ 2 ಗಂಟೆ 29 ನಿಮಿಷಕ್ಕೆ ಪ್ರಾರಂಭವಾಗುತ್ತದೆ. ಸೂರ್ಯಗ್ರಹಣದ ಮಧ್ಯಾವಧಿ ಸಂಜೆ 4 ಗಂಟೆ 30 ನಿಮಿಷ. ಸಂಜೆ 6 ಗಂಟೆ 32ಕ್ಕೆ ಗ್ರಹಣ ಮುಗಿಯಲಿದೆ. ಸೂರ್ಯಗ್ರಹಣ ಮುಗಿಯುವ ಮೊದಲೇ ಭಾರತದಲ್ಲಿ ಸೂರ್ಯಾಸ್ತ ಸಂಭವಿಸುತ್ತದೆ. ಹಾಗಾಗಿ ಭಾರತದಲ್ಲಿ ಸೂರ್ಯಾಸ್ತವನ್ನು ಸೂರ್ಯಗ್ರಹಣದ ಮೋಕ್ಷ ಎಂದು ಪರಿಗಣಿಸಲಾಗುತ್ತದೆ.



ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸೂತಕ ಅವಧಿಯು ಗ್ರಹಣ ಪ್ರಾರಂಭವಾಗುವ 12 ಗಂಟೆಗಳ ಮೊದಲು ಪ್ರಾರಂಭವಾಗುತ್ತದೆ. ಹಾಗಾಗಿ ಆ ಸಮಯದಲ್ಲಿ ಯಾವುದೇ ಪೂಜೆಯನ್ನು ಮಾಡುವುದು ಮಂಗಳಕರವಲ್ಲ.



ಸೂರ್ಯ ಗ್ರಹಣ ಇಡೀ ಭಾರತದಲ್ಲಿ ಗೋಚರವಾಗಲಿದೆ. ಸೂರ್ಯಗ್ರಹಣದ ಸಮಯದಲ್ಲಿ ಎಲ್ಲ ದೇವಸ್ಥಾನದ ಬಾಗಿಲು ಮುಚ್ಚಿರಲಿವೆ. ಸೂರ್ಯಗ್ರಹಣ ಮುಗಿಯುತ್ತಿದ್ದಂತೆ ಎಲ್ಲರೂ ಸ್ನಾನ ಮಾಡಿ ನಂತರ ದೇವರ ಪೂಜೆ ಮಾಡಬೇಕು. ಕಾರ್ತಿಕ ಮಾಸದ ಅಮಾವಾಸ್ಯೆಯಂದು ಸೂರ್ಯಗ್ರಹಣ ಸಂಭವಿಸುವುದರಿಂದ ಈ ದಿನ ತೀರ್ಥಯಾತ್ರೆ, ಸ್ನಾನ ಮತ್ತು ದಾನಕ್ಕೆ ವಿಶೇಷ ಮಹತ್ವವಿದೆ ಎನ್ನಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ