LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಂದ್‌ ಕೈಬಿಡಿ: ಕನ್ನಡಪರ, ರೈತ ಸಂಘಟನೆಗಳಿಗೆ ಡಿ.ಕೆ. ಶಿವಕುಮಾರ ಮನವಿ

Advertisement

ಬೆಂಗಳೂರು, ಜುಲೈ 31: ರಾಜ್ಯದ ಹಿತಾಸಕ್ತಿಯ ರಕ್ಷಣೆಯೇ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಯಾವುದೇ ಕಾರಣಕ್ಕೂ ಜನರ ಹಿತಕ್ಕೆ ವಿರುದ್ಧವಾದ ನಿರ್ಧಾರ ಕೈಗೊಳ್ಳುವುದಿಲ್ಲ. ಆದ್ದರಿಂದ ಉದ್ದೇಶಿತ ಕರ್ನಾಟಕ ಬಂದ್‌ ಅನ್ನು ಹಿಂತೆಗೆದುಕೊಳ್ಳುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕನ್ನಡಪರ ಹಾಗೂ ರೈತಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಕನ್ನಡಪರ ಮತ್ತು ರೈತಪರ ಸಂಘಟನೆಗಳು ಹೋರಾಟ ನಡೆಸುವುದು ಅವರ ಪ್ರಜಾಪ್ರಭುತ್ವದ ಹಕ್ಕು ಎಂದು ಹೇಳಿದರು. ಆದರೆ ಯಾವುದೇ ಪ್ರತಿಭಟನೆಗೆ ಮುಂದಾಗುವ ಮುನ್ನ ಎಲ್ಲ ವಾಸ್ತವಾಂಶಗಳನ್ನು ಅರಿತುಕೊಳ್ಳುವುದು ಅಗತ್ಯ ಎಂದು ತಿಳಿಸಿದರು.

ರಾಜ್ಯದ ಹಿತಾಸಕ್ತಿಯನ್ನು ಕಾಪಾಡಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ. ಜನರು ವಿಶ್ವಾಸವಿಟ್ಟು ಅಧಿಕಾರ ನೀಡಿರುವಾಗ ಅವರ ಹಿತಕ್ಕೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಹೀಗಾಗಿ ಬಂದ್‌ ನಿರ್ಧಾರವನ್ನು ಮರುಪರಿಶೀಲಿಸಿ ಹಿಂತೆಗೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಕರ್ನಾಟಕ ಬಂದ್‌ನಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಈ ವಿಚಾರದಲ್ಲಿ ಕಾನೂನು ಪ್ರಕ್ರಿಯೆ ಹಾಗೂ ನ್ಯಾಯಾಲಯದ ಆದೇಶಗಳಿಗೆ ತಮ್ಮದೇ ಆದ ಮಹತ್ವವಿದೆ. ಬಂದ್‌ನಿಂದ ಸಾರ್ವಜನಿಕರಿಗೆ ಅನಗತ್ಯ ತೊಂದರೆ ಉಂಟಾಗಲಿದ್ದು, ಸಂಘಟನೆಗಳು ಈ ಅಂಶವನ್ನೂ ಪರಿಗಣಿಸಬೇಕು ಎಂದು ಅವರು ಹೇಳಿದರು.

ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಕಾಂಗ್ರೆಸ್ ಸರ್ಕಾರ ಸದಾ ಬದ್ಧತೆಯಿಂದ ಕೆಲಸ ಮಾಡುತ್ತಿದೆ ಎಂದು ತಿಳಿಸಿದ ಅವರು, ಬಿಜೆಪಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಡೆಸುತ್ತಿರುವ ಪ್ರತಿಭಟನೆ ಅಗತ್ಯವಿರಲಿಲ್ಲ ಎಂದು ಅಭಿಪ್ರಾಯಪಟ್ಟರು. ಈ ವಿಷಯದಲ್ಲಿ ಅವರ ಪಕ್ಷದ ಸಂಸದರೂ ಪ್ರಯತ್ನ ನಡೆಸಿದ್ದಾರೆ ಎಂದು ಹೇಳಿದರು.

ಶೀಘ್ರದಲ್ಲೇ ಸರ್ವಪಕ್ಷ ಸಭೆ ಕರೆದು ರಾಜ್ಯದ ಹಿತದೃಷ್ಟಿಯಿಂದ ಸಮಗ್ರ ಚರ್ಚೆ ನಡೆಸಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗುವುದು. ಆ ಸಭೆ ನಡೆಯುವವರೆಗೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ಈ ಬಾರಿ ಜುಲೈ ತಿಂಗಳಲ್ಲಿ ತಮಿಳುನಾಡಿಗೆ ಕೇವಲ 0.6 ಟಿಎಂಸಿ ನೀರನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಕಳೆದ ನೂರು ವರ್ಷಗಳ ಇತಿಹಾಸದಲ್ಲೇ ಜುಲೈ ತಿಂಗಳಲ್ಲಿ ಇಷ್ಟು ಕಡಿಮೆ ಪ್ರಮಾಣದ ನೀರು ಹರಿಸಿರುವುದು ಇದೇ ಮೊದಲ ಬಾರಿಯಾಗಿದ್ದು, ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಅತ್ಯಂತ ಎಚ್ಚರಿಕೆಯಿಂದ ನಡೆದುಕೊಂಡಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲೆಗಳ ಸುತ್ತ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್‌ಗೆ ನಿಷೇಧ; ಕರ್ನಾಟಕ ಸರ್ಕಾರದ ಕಟ್ಟುನಿಟ್ಟಿನ ಆದೇಶಪೊಲೀಸ್ ವಶದಲ್ಲಿದ್ದ ಟ್ರಕ್ ಪ್ರತಿಭಟನಾ ಸ್ಥಳಕ್ಕೆ ಹೇಗೆ ಬಂತು?; ದಿಲ್ಲಿ ಪೊಲೀಸರಿಗೆ ಕಾಂಗ್ರೆಸ್ ಪ್ರಶ್ನೆಮಧುರ ಕಂಠ ಮೌನ: ಹಿರಿಯ ಹಿನ್ನೆಲೆ ಗಾಯಕಿ ಕೆ. ಜಮುನಾ ರಾಣಿ ನಿಧನಶಾಲೆಗೆ ಮೊಬೈಲ್ ತರಬೇಡ ಎಂದಿದ್ದಕ್ಕೆ ಮುಖ್ಯ ಶಿಕ್ಷಕಿಯ ಮೇಲೆ ಕಲ್ಲೆತ್ತಿದ ವಿದ್ಯಾರ್ಥಿಆ. 13ಕ್ಕೆ ಕರ್ನಾಟಕ ಬಂದ್: ವಾಟಾಳ ನಾಗರಾಜ ಘೋಷಣೆಸಂಸತ್ ಆವರಣದಲ್ಲಿ ಪ್ರತಿಪಕ್ಷಗಳಿಂದ ದೇಣಿಗೆ ಕಳ್ಳತನದ ವಿನೂತನ ಪ್ರತಿಭಟನೆಜೀವಾವಧಿ ಶಿಕ್ಷೆಗೆ ಹೈಕೋರ್ಟ ತಡೆ: ವಿನಯ ಕುಲಕರ್ಣಿಗೆ ಜಾಮೀನುರಸ್ತೆ ಗುಂಡಿಯ ಪವಾಡ: ಸತ್ತವಳು ಎದ್ದು ಕುಂತಳು!ಬಂದ್‌ ಕೈಬಿಡಿ: ಕನ್ನಡಪರ, ರೈತ ಸಂಘಟನೆಗಳಿಗೆ ಡಿ.ಕೆ. ಶಿವಕುಮಾರ ಮನವಿಗುಂಡಿನ ದಾಳಿ ಕುರಿತು ಸಂಸತ್‌ನಲ್ಲಿ ಸುಳ್ಳು ಹೇಳಿಕೆ: ಸಚಿವರ ವಿರುದ್ಧ ಹಕ್ಕುಚ್ಯುತಿ ನೋಟಿಸ್