LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬುದ್ಧಿಮಾಂದ್ಯ ಹುಡುಗಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಜೀವಾವಧಿ ಜೈಲು ಶಿಕ್ಷೆ

ಬೆಳಗಾವಿ : ಪರಿಶಿಷ್ಟ ಜಾತಿಯ ಬುದ್ಧಿಮಾಂದ್ಯ ಹುಡುಗಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಇಲ್ಲಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.



ಹುಸೇನಸಾಬ ಇಮಾಮಸಾಬ ನದಾಫ/ಪಿಂಜಾರ ಶಿಕ್ಷೆಗೊಳಗಾದ ಆರೋಪಿ.



ಕಟಕೋಳ ಪೊಲೀಸ್ ಠಾಣಾ ಹದ್ದಿಯ ಪೈಕಿ ಚಿಪ್ಪಲಕಟ್ಟಿ ಗ್ರಾಮದ ಪಿರ್ಯಾದಿದಾರಳ ಮನೆಯ ಮುಂದಿನ ಕಟ್ಟೆಯ ಮೇಲೆ ದಿನಾಂಕ: 26-03-2021 ರಂದು ಸಂಜೆ 5 ಗಂಟೆಗೆ ಇದ್ದಳು.



ಯುವತಿ ಬುದ್ದಿಮಾಂದ್ಯಳು, ಹಿಂದೂ ಪರಿಶಿಷ್ಟ ಪಂಗಡಕ್ಕೆ ಸೇರಿದವಳು ಎಂದು ಗೊತ್ತಿದ್ದರೂ ಆರೋಪಿತನು ಪಿರ್ಯಾದಿದಾರಳ ಮಗಳ ಮೇಲೆ ಅತ್ಯಾಚಾರ ಎಸಗಿದ ಅಪರಾಧದ ಬಗ್ಗೆ ಆಗಿನ ತನಿಖಾಧಿಕಾರಿ ರಾಮದುರ್ಗದ ಡಿಎಸ್ ಪಿ ರಾಮನಗೌಡ ಹಟ್ಟಿ ತನಿಖೆ ಕೈಗೊಂಡು ಕಲಂ 376(2)(ಎಲ್) ಐಪಿಸಿ ಮತ್ತು ಕಲಂ. 3(1)(ಡಬ್ಲೂ)(ಐ), 3(2)(5) ಎಸ್ಸಿ/ಎಸ್‌ಟಿ (ಪಿ.ಓ.ಎ) ತಿದ್ದುಪಡಿ ಕಾಯ್ದೆ 2015 ಅಡಿಯಲ್ಲಿ ಆರೋಪಿತನ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ. ಮಾನ್ಯ ನ್ಯಾಯಾಧೀಶರಾದ ಸವಿತಾಕುಮಾರಿ ಎನ್., 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬೆಳಗಾವಿ ಅವರು ಪ್ರಕರಣದ ವಿಚಾರಣೆ ಮಾಡಿ ಆರೋಪಿ ಮೇಲೆ ಆರೋಪಣೆಗಳು ಸಾಬೀತಾಗಿವೆ ಎಂದು ತೀರ್ಪು ನೀಡಿ, ಆರೋಪಿತನಿಗೆ ಕಲಂ. 376(2)(ಎಲ್) ಐಪಿಸಿ ರ ಅಡಿಯಲ್ಲಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ರೂ. 5,000/- ದಂಡ, ಕಲಂ 3(1)(ಡಬ್ಲೂ)(ಐ) ರ ಅಡಿಯಲ್ಲಿ 6 ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ಕಲಂ. 3(2)(5) ಎಸ್‌ಸಿ/ಎಸ್‌ಟಿ (ಪಿ.ಓ.ಎ) ತಿದ್ದುಪಡಿ ಕಾಯ್ದೆ 2015 ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ರೂ. 5,000/- ದಂಡ ವಿಧಿಸಿ ಪ್ರಕರಣದ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕ

ಆರ್. ಜಿ. ದೇವರೆಡ್ಡಿ ಪ್ರಕರಣ ನಡೆಸಿ ವಾದ ಮಂಡಿಸಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ