LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮೀಸಲಾತಿಗಾಗಿ ಹಗ್ಗ ಜಗ್ಗಾಟ; ೫೦ ಸೀಟು ಗೆದ್ದ ನಂತರ ಒಕ್ಕಲಿಗ ಮೀಸಲಾತಿ ಹೆಚ್ಚಳದ ವಿಚಾರ ಎಂದ ಯತ್ನಾಳ

ಬೆಳಗಾವಿ:  ಮೀಸಲಾತಿಗಾಗಿ ರಾಜ್ಯದ ಪ್ರಬಲ ಜಾತಿಗಳಾದ ಲಿಂಗಾಯತ ಮತ್ತು ಒಕ್ಕಲಿಗ ನಾಯಕರ ನಡುವೆ ಹಗ್ಗ ಜಗ್ಗಾಟ ನಡೆದಿದೆ.



ಒಕ್ಕಲಿಗರಿಗೂ ಮೀಸಲಾತಿ ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿಯ ಒಕ್ಕಲಿಗ ಸಚಿವರು ಮತ್ತು ಶಾಸಕರು ಮನವಿ ಮಾಡಿರುವ ವಿಚಾರವಾಗಿ ಬೆಳಗಾವಿಯಲ್ಲಿ ಪ್ರತಿಕ್ರಯಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ಆರ್. ಅಶೋಕ ಕೂಡ ಬಿಜೆಪಿಗೆ 50 ಸೀಟು ಗೆಲ್ಲಿಸಿಕೊಂಡು ಬರಲಿ. ಆಮೇಲೆ ಮೀಸಲಾತಿ ಕೊಡೋಣ ಎಂದಿದ್ದಾರೆ.



ನಾವು ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತರು ಬಿಜೆಪಿಗೆ ಐವತ್ತು ಸ್ಥಾನ ಗೆದ್ದು ಕೊಡುತ್ತಿದ್ದೇವೆ. ದೇವೇಗೌಡರ ತರಹ ಅಶೋಕ ಕೂಡ ಸೀಟು ಗೆದ್ದು ತರಲಿ, ಆವಾಗ ವಿಚಾರ ಮಾಡೋಣ ಎಂದು ಒಕ್ಕಲಿಗರ ಮೀಸಲಾತಿ ಹೆಚ್ಚಳಕ್ಕೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದರು.



ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಯನ್ನಾದರೂ ಕೊಡಿ, ಎಬಿಸಿಝೆಡ್ ಆದರೂ ಕೊಡಿ. ಆದರೆ 2ಎಗೆ ಇರುವ ಸೌಲಭ್ಯ ಇರಬೇಕು ಎಂದು ಯತ್ನಾಳ ಆಗ್ರಹಿಸಿದರು.





ಬಡವರಿಗಾಗಿ ಮಾತ್ರ ನಾವು ಮೀಸಲಾತಿ ಕೇಳುತ್ತಿದ್ದೇವೆ ಇದ್ದೇವೆ. ನನ್ನ ಹಾಗೆ ಶಾಸಕ ಆದವರಿಗೆ, ಡಿಸಿ ಆದವರಿಗೆ, ಶ್ರೀಮಂತರಿಗೆ ಈ ಮೀಸಲಾತಿ ಬೇಡ. ನಾವು ರಾಜಕೀಯಕ್ಕಾಗಿ ಮೀಸಲಾತಿ ಕೇಳುತ್ತಿಲ್ಲ, ನನಗೆ ಅದರ ಅಗತ್ಯ ಇಲ್ಲ. ನಾನು ಹೇಗಾದರೂ ಗೆಲ್ಲುತ್ತೇನೆ. ಆದರೆ ಬಡವರಿಗಾಗಿ ಮೀಸಲಾತಿ ಕೊಡಿ ಎಂದು ಹೇಳಿದರು.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ