LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಮತ್ತೆ ಎಥೆನಾಲ್ ಮಿಶ್ರಣ, ಪೆಟ್ರೋಲ್ ದರ ಹೆಚ್ಚಳ ಸಮರ್ಥಿಸಿಕೊಂಡ ಕೇಂದ್ರ

ಹೊಸದಿಲ್ಲಿ, ಆ. 1: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ದಾಖಲೆ ಮಟ್ಟಕ್ಕೆ ಏರಿದ ಸಂದರ್ಭದಲ್ಲೂ ದೇಶದಲ್ಲಿ ಪೆಟ್ರೋಲ್ ದರವನ್ನು ನಿಯಂತ್ರಣದಲ್ಲಿ ಇಡಲು ಇಂಧನದಲ್ಲಿ ಶೇ. 20ರಷ್ಟು ಎಥೆನಾಲ್ ಮಿಶ್ರಣ (ಇ–20) ಮಾಡುವ ಕೇಂದ್ರ ಸರ್ಕಾರದ ನೀತಿಯೇ ಪ್ರಮುಖ ಕಾರಣವಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.

ಸಚಿವಾಲಯದ ಪ್ರಕಾರ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 135 ಡಾಲರ್‌ಗೆ ಏರಿದ್ದ ವೇಳೆ ಎಥೆನಾಲ್ ಮಿಶ್ರಣ ಇರದಿದ್ದರೆ ದೆಹಲಿಯಲ್ಲಿ ಪೆಟ್ರೋಲ್ ದರವು ಲೀಟರ್‌ಗೆ ಸುಮಾರು 125 ರೂಪಾಯಿವರೆಗೆ ತಲುಪುವ ಸಾಧ್ಯತೆ ಇತ್ತು. ಆದರೆ, ದೇಶೀಯವಾಗಿ ನಿಗದಿತ ದರದಲ್ಲಿ ಲಭ್ಯವಾಗುವ ಶೇ. 20ರಷ್ಟು ಎಥೆನಾಲ್ ಅನ್ನು ಪೆಟ್ರೋಲ್‌ಗೆ ಬೆರೆಸಿದ ಪರಿಣಾಮ ಗ್ರಾಹಕರು ಕಡಿಮೆ ದರದಲ್ಲಿ ಇಂಧನ ಖರೀದಿಸಲು ಸಾಧ್ಯವಾಯಿತು. ಇದರಿಂದ ಸಂಕಷ್ಟದ ಅವಧಿಯಲ್ಲಿ ಪ್ರತಿಯೊಬ್ಬ ಗ್ರಾಹಕರಿಗೂ ಲೀಟರ್‌ಗೆ ಸರಿಸುಮಾರು 30 ರೂಪಾಯಿಯಷ್ಟು ಉಳಿತಾಯವಾಗಿದೆ ಎಂದು ಸಚಿವಾಲಯ ವಿವರಿಸಿದೆ.

ಎಥೆನಾಲ್ ಉತ್ಪಾದನೆಗಾಗಿ ಬಡವರ ಆಹಾರ ಧಾನ್ಯಗಳು ಅಥವಾ ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಸಬ್ಸಿಡಿ ಅಕ್ಕಿಯನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂಬ ಆರೋಪಗಳನ್ನೂ ಸಚಿವಾಲಯ ಸ್ಪಷ್ಟವಾಗಿ ತಳ್ಳಿಹಾಕಿದೆ. ಆಹಾರ ಭದ್ರತೆಗೆ ಧಕ್ಕೆಯಾಗದ ರೀತಿಯಲ್ಲೇ ಎಥೆನಾಲ್ ಉತ್ಪಾದನೆಗೆ ಕಚ್ಚಾ ವಸ್ತುಗಳನ್ನು ಬಳಸಲಾಗುತ್ತಿದೆ ಎಂದು ಅದು ತಿಳಿಸಿದೆ.

ಪಶ್ಚಿಮ ಏಷ್ಯಾದಲ್ಲಿನ ಯುದ್ಧ ಮತ್ತು ಸಂಘರ್ಷದಿಂದ ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಸತತ 75 ದಿನಗಳ ಕಾಲ ತೀವ್ರ ಏರಿಳಿತ ಕಂಡುಬಂದರೂ ದೇಶದಲ್ಲಿ ಚಿಲ್ಲರೆ ಇಂಧನ ದರಗಳನ್ನು ಸ್ಥಿರವಾಗಿ ಕಾಯ್ದುಕೊಳ್ಳಲು ಸಾಧ್ಯವಾಯಿತು ಎಂದು ಸಚಿವಾಲಯ ಹೇಳಿದೆ. ಬಳಿಕ ಮೇ ತಿಂಗಳಲ್ಲಿ ಪೆಟ್ರೋಲ್ ದರವನ್ನು ಲೀಟರ್‌ಗೆ 7.50 ರೂಪಾಯಿಯಷ್ಟು ಪರಿಷ್ಕರಿಸಲಾಗಿತ್ತು.

ಪ್ರಸ್ತುತ ಬೆಳಗಾವಿಯಲ್ಲಿ ಸಾಮಾನ್ಯ ಇ–20 (91 ಆಕ್ಟೇನ್) ಪೆಟ್ರೋಲ್ ದರ ಲೀಟರ್‌ಗೆ 112.06 ರೂಪಾಯಿ ಇದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ