LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಭಾರತದಲ್ಲಿ ವಾಸಿಸುವ ಎಲ್ಲರೂ ಹಿಂದೂಗಳೇ : ಮೋಹನ ಭಾಗವತ

ರಾಯಪುರ : ಭಾರತದಲ್ಲಿ ವಾಸಿಸುತ್ತಿರುವವರೆಲ್ಲ ಹಿಂದೂಗಳು, ಎಲ್ಲರ ಡಿಎನ್​ಎಗಳು ಒಂದೇ ಎಂದು ರಾಷ್ಟ್ರೀಯ ಸ್ವಯಂ ಸೇವಕ​ ಸಂಘ ಮುಖ್ಯಸ್ಥ ಮೋಹನ​ ಭಾಗವತ​ ಪುನರುಚ್ಛರಿಸಿದ್ದಾರೆ.



ಛತ್ತೀಸಗಡದಲ್ಲಿ ಸ್ವಯಂಸೇವಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಚರಣೆ ವಿಚಾರದಲ್ಲಿ ಯಾರು ಕೂಡ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಭಾರತದ ವೈವಿಧ್ಯತೆಯಲ್ಲಿ ಏಕತೆಯ ಗುಣ ಬಹಳ ಹಿಂದಿನದು. ಪ್ರಪಂಚದಲ್ಲಿ ಎಲ್ಲರನ್ನು ಒಗ್ಗೂಡಿ ಕರೆದುಕೊಂಡು ಹೋಗುವ ತತ್ವ ಹೊಂದಿರುವ ಕಲ್ಪನೆ ಹೊಂದಿರುವುದು ಹಿಂದುತ್ವದಲ್ಲಿ ಮಾತ್ರ ಎಂಬುದನ್ನು ಪ್ರತಿಪಾದಿಸಿದರು.



1925ರಿಂದಲೂ ನಾವು ಭಾರತದಲ್ಲಿ ವಾಸಿಸುವ ಎಲ್ಲರೂ ಹಿಂದೂಗಳು ಎಂದು ಹೇಳಿಕೊಂಡು ಬಂದಿದ್ದೇವೆ. ನಾವು ಭಾರತವನ್ನು ಮಾತೃಭೂಮಿ ಎಂದು ಪರಿಗಣಿಸಿದ್ದು, ವಿವಿಧತೆಯಲ್ಲಿ ಏಕತೆ ಎಂಬಂತೆ ಬದುಕುತ್ತಿದ್ದೇವೆ. ಧರ್ಮ, ಜಾತಿ, ಮತ, ಭಾಷೆ, ಅವರ ಸಿದ್ಧಾಂತಗಳನ್ನು ಲೆಕ್ಕಿಸದೆ ಈ ದೇಶದಲ್ಲಿ ವಾಸಿಸುವವರನ್ನೆಲ್ಲಾ ಹಿಂದೂ ಎಂದು ಪರಿಗಣಿಸಿದ್ದೇವೆ. ಪ್ರತಿಯೊಬ್ಬರ ನಂಬಿಕೆಯನ್ನು ಗೌರವಿಸುವ ಮತ್ತು ಎಲ್ಲಾ ಭಾರತೀಯರ ಡಿಎನ್​ಎ ಒಂದೇ ಎಂಬುದನ್ನು ಒತ್ತಿ ಹೇಳಿದ ಅವರು, ನಮ್ಮ ಪೂರ್ವಿಕರು 40 ಸಾವಿರ ವರ್ಷಗಳಿಂದ ಅಖಂಡ ಭಾರತದಲ್ಲಿದ್ದು, ನಮ್ಮೆಲ್ಲಾ ಡಿಎನ್​ಎ ಒಂದೇ. ನಮ್ಮ ಪೂರ್ವಿಕರು ಪ್ರತಿಯೊಬ್ಬರು ತಮ್ಮ ನಂಬಿಕೆ ಮತ್ತು ಆಚರಣೆಗೆ ಅಂಟಿಕೊಂಡಿರಬೇಕು ಎಂದು ತಿಳಿಸಿದರು. ಅವರು ಯಾರನ್ನು ಮತಾಂತರ ಮಾಡಲಿಲ್ಲ ಎಂದರು.



ಪ್ರತಿಯೊಂದು ಧರ್ಮದ ನಂಬಿಕೆ ಮತ್ತು ಆಚರಣೆಗಳನ್ನು ಗೌರವಿಸಬೇಕು ಎಂದು ಕರೆ ನೀಡಿದ ಅವರು, ಪ್ರತಿಯೊಬ್ಬರ ಮಾರ್ಗವನ್ನು ನಾವು ಗೌರವಿಸಬೆಕಿದೆ. ಪ್ರತಿಯೊಬ್ಬರ ಯಶಸ್ಸಿಗೆ ನಾವು ಹಾದಿಯಾಗಬೇಕು. ಆದರೆ ಬೇರೆಯವರ ಬಗ್ಗೆ ಕಾಳಜಿ ಇಲ್ಲದೇ ಸ್ವಾರ್ಥಿಗಳಾಗಬಾರದು ಎಂದು  ​ಹೇಳಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ