LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಅಂಬ್ಯುಲೆನ್ಸ ಚಾಲಕರೇ ರೋಗಿಗಳನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ

ಬೆಂಗಳೂರು, ೩೦:  ಅಂಬ್ಯುಲೆನ್ಸ ಚಾಲಕರು ಖಾಸಗಿ ಆಸ್ಪತ್ರೆಗಳ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳದೇ  ರೋಗಿಗಳನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೂಚನೆ ನೀಡಿದ್ದಾರೆ.



ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡಿದ್ದ  262 ಆಧುನಿಕ ಜೀವರಕ್ಷಕ ಅಂಬ್ಯುಲೆನ್ಸಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಅಂಬ್ಯುಲೆನ್ಸ ಚಾಲಕರು ರೋಗಿಗಳನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು. ಆದರೆ ಕೆಲವರು ಖಾಸಗಿ ಆಸ್ಪತ್ರೆಗಳ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ರೋಗಿಗಳನ್ನು ನೇರವಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ ಎಂದು ಹೇಳಿದರು. ಯಾಕೆ ಸರ್ಕಾರಿ ಆಸ್ಪತ್ರೆಯಲ್ಲಿ ಏನು ಕಡಿಮೆ ಆಗಿದೆ ಎಂದೂ ಅವರು  ಪ್ರಶ್ನಿಸಿದರು.



ಈ ಸಂದರ್ಭದಲ್ಲಿ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮಾತನಾಡಿ, ತುರ್ತು ಸಂದರ್ಭದಲ್ಲಿ  108 ಆಂಬ್ಯುಲೆನ್ಸ್‌ಗಳ ಸೇವೆ ಬಹಳ ಮುಖ್ಯ. ಆದರೆ, ಈ ಸೇವೆಯ ಗುಣಮಟ್ಟದಲ್ಲಿ ಕೆಲವು ಸಮಸ್ಯೆಗಳಿವೆ. ಈ ಸೇವೆಗೆ ಹೊಸ ರೂಪ ಕೊಡಬೇಕಿದೆ’ ಎಂದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ